6:32 AM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ನಾನು ಯಾವುದೇ ತಪ್ಪು ಮಾಡಿಲ್ಲ, ದೇವರ‌ ದಯೆ ನನ್ನ ಮೇಲಿದೆ: ಸಚಿವೆ ಶಶಿಕಲಾ ಜೊಲ್ಲೆ 

16/08/2021, 17:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನನ್ನ ಮೇಲಿನ ಆರೋಪ ಬಗ್ಗೆ ನಾನು ಗಮನ ಕೊಟ್ಟಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ತಪ್ಪು ಮಾಡುವ ಪರಿಸ್ಥಿತಿಯೂ ನನಗಿಲ್ಲ. ದೇವರ‌ ದಯೆ ನನ್ನ ಮೇಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಬುದ್ಧಿಮಾಂದ್ಯ ನನ್ನ ಮಗುವಿಗಾಗಿ ಈ ಸಮಾಜ ಸೇವೆ ಕ್ಷೇತ್ರಕ್ಕೆ ಬಂದಿದ್ದೇನೆ. ಆ ಮಗುವಿನ ನೋವನ್ನ ತಾಯಿಯಾಗಿ ಅನುಭವಿಸಿದ್ದೇನೆ. ಯಾರೋ ಏನೋ ಅಪಾದನೆ ಮಾಡಿದರೆ ಅದನ್ನ ಬೇಜಾರು ಮಾಡಿಕೊಳ್ಳದೇ ಸವಾಲಾಗಿ ಸ್ವೀಕರಿಸಿದ್ದೇನೆ ಎಂದು ಅವರು ನುಡಿದರು.

ಸಚಿವ ಸ್ಥಾನದಿಂದ ಕೆಳಗಿಳಿಸುವ ನಿಟ್ಟಿನಲ್ಲಿ ನನ್ನ ಮೇಲೆ ಆಪಾದನೆ ಮಾಡಿರಬಹುದು. ಯಾರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಕುರಿತು ಸಾಕ್ಷಾಧಾರ ಇಲ್ಲ. ಹಾಗಾಗಿ ಯಾರ ಮೇಲೂ ಆರೋಪ ಮಾಡುವುದಿಲ್ಲ. ಯಾರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೋ ಅವರು ಅನುಭವಿಸುತ್ತಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಏನಾದ್ರೂ ಷಡ್ಯಂತ್ರ ಮಾಡಿದ್ದರೆ ದೇವರು ನೋಡಿಕೊಳ್ಳುತ್ತಾನೆ. ಬಡವರ ಕಣ್ಣೀರು ಒರೆಸಿದ ಆಶೀರ್ವಾದ ನನ್ನ ಜತೆ ಇದೆ.

ಇದೇ ಕಾರಣಕ್ಕಾಗಿ ಎರಡನೇ ಬಾರಿ ಸಚಿವೆಯಾಗಿ ಅಧಿಕಾರವಹಿಸಿಕೊಂಡಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು