12:02 PM Friday15 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ನಂಜನಗೂಡು ತಾಲೂಕು ನಾಯಕರ ಸಂಘದಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ

07/05/2024, 21:40

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ನಗರದ ಗೌರಿಘಟ್ಟ ಬೀದಿಯಲ್ಲಿರುವ ನಾಯಕರ ಭವನದಲ್ಲಿ ತಾಲ್ಲೂಕು ನಾಯಕರ ಸಂಘದಿಂದ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.


ಶ್ರೀ ನಿವಾಸ್ ಪ್ರಸಾದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನಾಚರಣೆ ಮಾಡಲಾಯಿತು.
ಬಳಿಕ ತಾಲ್ಲೂಕು ನಾಯಕರ ಸಂಘದ ಗೌರವಾಧ್ಯಕ್ಷ ಹಾಗೂ ಮಾಜಿ ಜಿ.ಪಂ ಸದಸ್ಯ ಸಿ. ಚಿಕ್ಕರಂಗನಾಯಕ ಮಾತನಾಡಿ, ಶ್ರೀನಿವಾಸ್ ಪ್ರಸಾದ್ ರವರು ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಸಾಮಾಜಿಕ ಹರಿಕಾರ, ಚಿಂತಕ, ಸಾಮಾಜಿಕ ಸುಧಾರಕ ಎಂದರೆ ತಪ್ಪಾಗಲಾರದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಸಚಿವರಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದರು ಸಾಮಾಜಿಕ ನ್ಯಾಯಕ್ಕೆ ದುಡಿದು ಮೊಟ್ಟಮೊದಲ ಬಾರಿಗೆ ನಂಜನಗೂಡಿನ ನಗರಸಭೆಯಲ್ಲಿ ಪೌರಕಾರ್ಮಿಕರಿಗೆ ಅಧ್ಯಕ್ಷರಾಗುವ ಅವಕಾಶ ಕಲ್ಪಿಸಿದ್ದರು. ಹೇಳಿದ ಕೆಲಸವನ್ನು ಚಾಚು ತಪ್ಪದೇ ಮಾಡುತ್ತಿದ್ದರು. ತಳ ಸಮುದಾಯಕ್ಕೆ ಮೊದಲ ಆದ್ಯತೆ ನೀಡಿ ಪ್ರತಿ ಸಮುದಾಯಕ್ಕೂ ನಂಜನಗೂಡಿನಲ್ಲಿ ಭವನ ನಿರ್ಮಾಣ ಮಾಡಲು ಸ್ಥಳವಕಾಶ ಮಾಡಿಕೊಟ್ಟು ನಿವೇಶನಗಳನ್ನು ನೀಡಿದ್ದಾರೆ. ಬುದ್ಧ ಬಸವ ಅಂಬೇಡ್ಕರ್ ಅವರ ಅನುಯಾಯಿಯಾಗಿ ಆದರ್ಶವನ್ನು ರೂಪಿಸಿಕೊಂಡಿದ್ದರು. ಅವರು ನಮ್ಮೊಟ್ಟಿಗೆ ಇಲ್ಲದಿದ್ದರೂ ಅವರು ಬದುಕಿದ ಬದುಕು ಇನ್ನು ಜೀವಂತವಾಗಿದೆ ಎಂದು ಸ್ಮರಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲ್ಲೂಕು ನಾಯಕರ ಸಂಘದ ಅಧ್ಯಕ್ಷ ಬಂಗಾರಸ್ವಾಮಿ, ಖಜಾಂಚಿ ರಂಗಸ್ವಾಮಿ, ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿವಾಸ್, ಬಿಜೆಪಿ ಮುಖಂಡ ಕುಂಬ್ರಹಳ್ಳಿ ಸುಬ್ಬಣ್ಣ, ಕಾಂಗ್ರೆಸ್ ಮುಖಂಡ ದೊರೆಸ್ವಾಮಿ ನಾಯಕ, ಮುಖಂಡರಾದ ಹಳ್ಳದಕೇರಿ ನಾಗರಾಜು, ಹೆಡತಲೆ ನಾಗರಾಜು, ಬಿಜೆಪಿ ಎಸ್ಟಿ ಮೋರ್ಚಾ ನಗರಾಧ್ಯಕ್ಷ ಸುದೇಂದ್ರ ಕುಮಾರ್, ಮಾಜಿ ತಾಪಂ ಸದಸ್ಯರಾದ ಕೆ.ಡಿ ಮಂಜು, ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು