10:52 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 32ನೇ ಪಕ್ಷಿಕೆರೆ ಶಾಖೆ ಮೇ 10ರಂದು ಉದ್ಘಾಟನೆ

08/05/2024, 19:43

ಮಂಗಳೂರು(reporterkarnataka.com): ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ 31 ಶಾಖೆಗಳನ್ನು ಹೊಂದಿದ್ದು, ಇದೀಗ ಮುಲ್ಕಿಯ ಮುಖ್ಯ ರಸ್ತೆಯಲ್ಲಿರುವ ‘ಲಘುವಿ ಕಾಂಪ್ಲೆಕ್ಸ್’, ನಲ್ಲಿ ತನ್ನ ನೂತನ 32ನೇ ಪಕ್ಷಿಕೆರೆ ಶಾಖೆಯು ಮೇ 10ರಂದು ಅಪರಾಹ್ನ 12.೦೦ ಗಂಟೆಗೆ ಸಾರ್ವಜನಿಕ ಸೇವೆಗಾಗಿ ಲೋಕಾರ್ಪಣೆಗೊಳ್ಳಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಚಿತ್ತರಂಜನ್ ಬೋಳಾರ್ ಅವರು ವಹಿಸಲಿದ್ದಾರೆ. ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ನೂತನ ಶಾಖೆಯ ಉದ್ಘಾಟನೆಯನ್ನು ಮಾಡಲಿದ್ದಾರೆ. ಪಕ್ಷಿಕೆರೆ ಸಂತ ಜುದರ ಪುಣ್ಯಕ್ಷೇತ್ರದ ಧರ್ಮಗುರುಗಳಾದ ಮೆಲ್ವಿನ್ ನೊರೊನ್ಹಾ ಅವರು ದೀಪ ಪ್ರಜ್ವಲನೆಯನ್ನು ಮಾಡಲಿದ್ದಾರೆ. ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ. ಸೀತಾರಾಮ್ ಶೆಟ್ಟಿ ಅವರು ಭದ್ರತಾಕೋಶ ಉದ್ಘಾಟನೆಯನ್ನು ಮಾಡಲಿದ್ದಾರೆ. ಕೆಮ್ರಾಲ್ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಮಯ್ಯದಿ ಅವರು ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡಲಿದ್ದಾರೆ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಎಸ್ ಕೋಡಿ, ಪಕ್ಷಿಕೆರೆ ಇದರ ಅಧ್ಯಕ್ಷರಾದ ನವೀನ್ ಹರಿಪಾದೆ ಅವರು ನಿರಖು ಠೇವಣಿ ಪತ್ರ ಬಿಡುಗಡೆಯನ್ನು ಮಾಡಲಿದ್ದಾರೆ. ಸಮಾಜ ಸೇವಕರಾದ ಧನಂಜಯ ಶೆಟ್ಟಿಗಾರ್ ಅವರು ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ. ಪ್ರಿಯದರ್ಶಿನಿ ಸಹಕಾರ ಸಂಘ (ನಿ.) ಹಳೆಯಂಗಡಿ ಇದರ ಅಧ್ಯಕ್ಷರಾದ ಎಚ್. ವಸಂತ್ ಬೆರ್ನಾಡ್ ಅವರು ಆವರ್ತನ ಠೇವಣಿಗೆ ಚಾಲನೆಯನ್ನು ನೀಡಲಿದ್ದಾರೆ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆಯಾದ ಕಸ್ತೂರಿ ಪಂಜ ಅವರು ಉಳಿತಾಯ ಖಾತೆಗೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ವಿನೋದ್ ಬೊಳ್ಳೂರು ಹಾಗೂ ಕಟ್ಟಡದ ಮಾಲಕರಾದ ಶ್ರೀನಿವಾಸ ಕೋಟ್ಯಾನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯಕ್ತ ನಿರಖು ಠೇವಣಿಯ ಮೇಲೆ ವಿಶೇಷ ಬಡ್ಡಿ ದರವನ್ನು ನೀಡಲಾಗುವುದು. ಸಂಘದ ಎಲ್ಲಾ ಶಾಖೆಗಳಲ್ಲಿ ಚಿನ್ನಾಭರಣ ಸಾಲ, ನೆಫ್ಟ್, ಆರ್‌ಟಿಜಿಎಸ್, ಇ-ಮುದ್ರಾಂಕ ಸೇವೆಯು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಭ್ಯವಿದ್ದು, ಸಂಘದಲ್ಲಿ ಈಗಾಗಲೇ ಕೋರ್-ಬ್ಯಾಂಕಿಂಗ್ ಸೌಲಭ್ಯ ಅಳವಡಿಸಲಾಗಿದೆ. ಅದೇ ರೀತಿ ಎಲ್‌ಐಸಿ, ಕೇರ್, ಇಫ್ಕೋಟೋಕಿಯ ಜನರಲ್ ಇನ್ಸುರೆನ್ಸ್ ಕಂಪೆನಿಯ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್‌ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು