2:49 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ; ಛಾವಣಿಗೆ ಸಂಪೂರ್ಣ ಹಾನಿ

09/05/2024, 10:20

ಕಾರ್ಕಳ(reporterkarnataka.com): ಇಲ್ಲಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ನಡೆದಿದೆ.


ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು ಎಂದಿನಂತೆ ಇಂದೂ ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು ಒಂದು ಕಟ್ಟಡ ಸ್ಫೋಟಕ್ಕೆ ತುತ್ತಾಗಿದೆ.
ಸ್ಫೋಟದ ಸಂದರ್ಭ ಒಳಗೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ಗಾಯಗೊಂಡಿದ್ದಾರೆ. ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡ ಸಂಪೂರ್ಣ ಹಾನಿಗೀಡಾಗಿದೆ.
ಸ್ಫೋಟಕ್ಕೆ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು