11:42 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ನಿಧನ: ಸ್ಪೀಕರ್, ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಸಹಿತ ಹಲವು ಗಣ್ಯರ ಸಂತಾಪ

09/05/2024, 10:51

ಬೆಂಗಳೂರು/ಮಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ‌ ಸೂಚಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ,ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ ನಿಧನರಾಗಿದ್ದು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ.
ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ,ಕುಟುಂಬ ವರ್ಗದವರಿಗೆ, ಹಿತೈಷಿಗಳಿಗೆ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು
ಸ್ಪೀಕರ್ ಯು. ಟಿ ಖಾದರ್ ಹೇಳಿದ್ದಾರೆ.
ವಸಂತ ಬಂಗೇರ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಬಿಜೆಪಿ, ಜನತಾದಳ, ಕಾಂಗ್ರೆಸ್ ಈ ಮೂರೂ ಪಕ್ಷಗಳಿಂದ ಸ್ಪರ್ಧಿಸಿ ಗೆದ್ದು ಅವರು ಶಾಸಕರಾಗಿದ್ದರು.
ಅವರ ಕುಟುಂಬಸ್ಥರು, ಬಂಧು- ಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ವಸಂತ ಬಂಗೇರ ಅವರ ಅಗಲಿಕೆ ಕರಾವಳಿ ಜನತೆಗೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ ಕುಂಪಲ ಅವರು ಕಂಬನಿ ಮಿಡಿದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಹಿರಿಯ ರಾಜಕೀಯ ಮುತ್ಸದ್ಧಿಯಾದ ಅವರು ಬಿಜೆಪಿಯು ದೇಶದಲ್ಲಿ ನೆಲೆ ನಿಲ್ಲುತ್ತಿರುವ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿಯನ್ನು ಪ್ರತಿನಿಧಿಸಿದವರು.
ಕಾಲಾಂತರದಲ್ಲಿ ರಾಜಕೀಯವಾಗಿ ಬೇರೆ ಹಾದಿ ಹಿಡಿದರೂ, ತನ್ನ ಸ್ವಸಾಮರ್ಥ್ಯದಿಂದ ಕರಾವಳಿಯ ರಾಜಕೀಯದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ಅಪರೂಪದ ರಾಜಕಾರಣಿ ಆಗಿದ್ದರು. ಇಂಥಹ ಧೀಮಂತ ನಾಯಕನ ಅಗಲಿಕೆಯು ಕರ್ನಾಟಕ ಹಾಗೂ ಕರಾವಳಿಯ ಜನತೆಯ ಪಾಲಿಗೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ.
ಮಾಜಿ ಶಾಸಕರಾದ ವಸಂತ ಬಂಗೇರ ಅವರ ಅಗಲಿದ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಹಾಗೂ ಶ್ರೀಯುತರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಇವರ ಕುಟುಂಬ, ಬಂಧುವರ್ಗ ಹಾಗು ಅಪಾರ ಸ್ನೇಹಿತವರ್ಗಕ್ಕೆ ಆ ಭಗವಂತ ದಯಪಾಲಿಸಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು