5:29 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಎನ್​ಐಎ ತಂಡದಿಂದ 4ನೇ ಆರೋಪಿಯ ಸಕಲೇಶಪುರದಲ್ಲಿ ಬಂಧನ

10/05/2024, 13:33

ಮಂಗಳೂರು(reporterkarnataka.com): ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ಆರೋಪಿಯನ್ನು ಎನ್​ಐಎ ತಂಡ ಬಂಧಿಸಿದೆ.
ಸುಳ್ಯದ‌ ಶಾಂತಿ ನಗರ ನಿವಾಸಿಯಾದ ಮುಸ್ತಫಾ ಪೈಚಾರ್ ಎಂಬಾತನನ್ನು ಎನ್​ಐಎ ತಂಡ ಹಾಸನದ‌ ಸಕಲೇಶಪುರ ಬಳಿ ದಸ್ತಗಿರಿ ಮಾಡಿದೆ. ಈತ ಪಿಎಫ್ಐ ಮುಖಂಡ ಎನ್ನಲಾಗಿದೆ. ಆರೋಪಿಯು ಹಾಸನ ಜಿಲ್ಲೆಯ ಸಕಲೇಶಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲೆ ಮರೆಸಿಕೊಂಡಿದ್ದ. ಎನ್​ಐಎ ಇನ್ಸ್ ಪೆಕ್ಟರ್ ಷಣ್ಮುಗಂ ಅವರ ತಂಡ ಆರೋಪಿಯ ಬಂಧಿಸುವಲ್ಲಿ ಯಶಸ್ವಿಯಾಗಿದೆ.ಪ್ರವೀಣ್ ನೆಟ್ಟಾರ್ ಅವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆ ಮಾಡಿದ್ದರು.ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್ಐಎ ಕಚೇರಿಗೆಯತ್ತ ಕೊಂಡೊಯ್ದಿದ್ದಾರೆ.
ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಆರೋಪಿ ಮುಸ್ತಫಾ ಪೈಚಾರ್ ತಲೆಮರೆಸಿಕೊಂಡಿದ್ದು ಹೀಗಾಗಿ ಆತನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್​ಐಎ ಅಧಿಕಾರಿಗಳು ಘೋಷಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು