5:57 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಂಗಳೂರು: ನಾಳೆಯಿಂದ 5 ದಿನಗಳ ಕಾಲ ವಿವಿ ಕಾಲೇಜಿನಲ್ಲಿ ಹಿಂದಿ ಯುವ ಬರಹಗಾರರ ಶಿಬಿರ

12/05/2024, 12:02

ಮಂಗಳೂರು(reporterkarnataka.com): ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರಕಾರ ಶಿಕ್ಷಣ ಮಂತ್ರಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯವು 5 ದಿವಸಗಳ ಬರಹಗಾರರ ಶಿಬಿರವನ್ನು ಮೇ 13ರಿಂದ 17 ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಹಿಂದಿ ಸ್ನಾತಕೋತ್ತರ ವಿಭಾಗ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಿದೆ.

ಈ ಕಾರ್ಯಕ್ರಮದ ಉದ್ಘಾಟನೆಗೆ ವಿಶ್ವವಿದ್ಯಾನಿಲಯದ ವಿ.ವಿ.ಕುಲಪತಿ ಪ್ರೊ. ಪಿ.ಎಲ್.ಧರ್ಮ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ವಿಶೇಷ ಅತಿಥಿಗಳಾಗಿ ಪ್ರೊ. ಸುನಿಲ್. ಬಿ. ಕುಲಕರ್ಣಿ (ನಿರ್ದೇಶಕರು, ಕೇಂದ್ರೀಯ ಹಿಂದಿ ನಿರ್ದೇಶನಾಲಯ, ನವದೆಹಲಿ) ಉಪಸ್ಥಿತರಿರುವರು. ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ 10 ಕಾಲೇಜಿನ 23 ವಿದ್ಯಾರ್ಥಿಗಳು ಮತ್ತು ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸಲಿರುವರು. ಆಯೋಜಕರಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ರಾಜು ಮೊಗವೀರ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಸೂಯ ರೈ.
ಹಿಂದಿ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ನಾಗರತ್ನ ಎನ್.ರಾವ್, ಪ್ರದೀಪಕುಮಾರ, ನವದೆಹಲಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ. ಪುಣೆ. ಡಾ. ಪ್ರತಿಭಾ ಮೊದಲಿಯಾರ್, ಮೈಸೂರು. ಪ್ರೊ. ಪ್ರಭಾ. ವಿ.ಭಟ್. ಧಾರವಾಡ. ಡಾ. ಸುಮಂಗಲಾ ಮಮ್ಮಿಗಟ್ಟಿ, ಧಾರವಾಡ, ಡಾ. ಮಂಜುನಾಥ, ಐಕಳ, ಮಂಗಳೂರು ಡಾ. ಮುಕುಂದ ಪ್ರಭು, ಮಂಗಳೂರು, ಡಾ. ಸುಮಾ. ಟಿ. ರೊಡನ್ನವರ್. ಮಂಗಳೂರು ಅವರು ಭಾಗವಹಿಸುವರು.
ಈ ಶಿಬಿರವು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 4 ಗಂಟೆಯವರೆಗೆ ನಡೆಯುವುದು. ಶಿಬಿರಾರ್ಥಿಗಳಿಗೆ ನೊಂದಣಿ ಮತ್ತು ಬೆಳಿಗ್ಗೆ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಚಹಾ, ಕೇಂದ್ರ ಸರ್ಕಾರದ ಅನುದಾನದಲ್ಲಿ ಉಚಿತವಾಗಿ ಇರುವುದು. ಈ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಪ್ರಥಮವಾಗಿ ಆಯೋಜಿಸಲಾಗಿದ್ದು, ಯುವ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು