11:58 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು: ರೊನಿ ಅರುಣ್ ಅವರ ರಿಕ್ಷಾ ಡೈರಿ ಲೋಕಾರ್ಪಣೆ

12/05/2024, 18:34

ಮಂಗಳೂರು(reporterlarnataka.com): ಮಾಂಡ್ ಸೊಭಾಣ್ ಪ್ರಕಾಶನದ 22ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಳ್ಳಾಲ ಸೋಮೇಶ್ವರದಲ್ಲಿರುವ ಪಶ್ಚಿಮ್ ಟ್ರಸ್ಟ್ ಸಭಾಂಗಣದಲ್ಲಿ ಮೇ 9ರಂದು ಲೋಕಾರ್ಪನೆಗೊಂಡಿತು. ಹಿರಿಯ ಲೇಖಕಿ ಮತ್ತು ಪ್ರಕಾಶಕಿ ಗ್ಲೇಡಿಸ್ ರೇಗೊ ಪುಸ್ತಕ ಬಿಡುಗಡೆಗೊಳಿಸಿದರು.
ಮುಖ್ಯ ಅತಿಥಿ ಪಶ್ಚಿಮ್ ಟ್ರಸ್ಟ್ ನಿರ್ದೇಶಕ ರೋಹಿತ್ ಸಾಂಕ್ತುಸ್ ಶುಭ ಹಾರೈಸಿದರು. ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ, ಅಧ್ಯಕ್ಷ ಲುವಿ ಪಿಂಟೊ, ತೆಲೊಕಾ ಸಂಸ್ಥೆಯ ನಿರ್ದೇಶಕಿ ಕ್ಲಾರಾ ಡಿಕುನ್ಹಾ ಉಪಸ್ಥಿತರಿದ್ದರು. ಲೇಖಕ ರೊನಿ ಅರುಣ್ ಪ್ರಸ್ತಾವನೆಗೈದು ವಿತೊರಿ ಕಾರ್ಕಳ ನಿರೂಪಿಸಿದರು.
ರಿಕ್ಷಾ ಡೈರಿ ದಿರ್ವೆಂ ಕೊಂಕಣಿ ಮಾಸಿಕದಲ್ಲಿ ಪ್ರಕಟವಾದ 44 ಲೇಖನಗಳ ಸಂಗ್ರಹ. ಕಲಾವಿದ ವಿಲ್ಸನ್ ಕಯ್ಯಾರ್ ಮುಖಪುಟ ರಚಿಸಿದ್ದಾರೆ. ಈ ಮೊದಲು ʻಬಿಡಾರ್ʼ ಕಥಾಸಂಕಲನ ಹಾಗೂ ʻಥಕಾನಾತ್‌ಲ್ಲೊ ಝುಜಾರಿʼ (ಜೀವನ ಚರಿತ್ರೆ) ಪುಸ್ತಕಗಳನ್ನು ರೊನಿ ಅರುಣ್ ಬರೆದಿದ್ದು ʻಥಕಾನಾತ್‌ಲ್ಲೊ ಝುಜಾರಿʼ ಪುಸ್ತಕಕ್ಕೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಲಭಿಸಿದೆ. ರಿಕ್ಷಾಡ ಡೈರಿ ಪುಸ್ತಕದ ರಿಯಾಯಿತಿ ಬೆಲೆ 100/- ಮಾತ್ರ. ಪುಸ್ತಕಕ್ಕಾಗಿ ಮಾಂಡ್ ಸೊಭಾಣ್ ಕಚೇರಿ ಅಥವಾ ಲೇಖಕರನ್ನು ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು