7:43 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಮಂಗಳೂರು: ರೊನಿ ಅರುಣ್ ಅವರ ರಿಕ್ಷಾ ಡೈರಿ ಲೋಕಾರ್ಪಣೆ

12/05/2024, 18:34

ಮಂಗಳೂರು(reporterlarnataka.com): ಮಾಂಡ್ ಸೊಭಾಣ್ ಪ್ರಕಾಶನದ 22ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಳ್ಳಾಲ ಸೋಮೇಶ್ವರದಲ್ಲಿರುವ ಪಶ್ಚಿಮ್ ಟ್ರಸ್ಟ್ ಸಭಾಂಗಣದಲ್ಲಿ ಮೇ 9ರಂದು ಲೋಕಾರ್ಪನೆಗೊಂಡಿತು. ಹಿರಿಯ ಲೇಖಕಿ ಮತ್ತು ಪ್ರಕಾಶಕಿ ಗ್ಲೇಡಿಸ್ ರೇಗೊ ಪುಸ್ತಕ ಬಿಡುಗಡೆಗೊಳಿಸಿದರು.
ಮುಖ್ಯ ಅತಿಥಿ ಪಶ್ಚಿಮ್ ಟ್ರಸ್ಟ್ ನಿರ್ದೇಶಕ ರೋಹಿತ್ ಸಾಂಕ್ತುಸ್ ಶುಭ ಹಾರೈಸಿದರು. ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ, ಅಧ್ಯಕ್ಷ ಲುವಿ ಪಿಂಟೊ, ತೆಲೊಕಾ ಸಂಸ್ಥೆಯ ನಿರ್ದೇಶಕಿ ಕ್ಲಾರಾ ಡಿಕುನ್ಹಾ ಉಪಸ್ಥಿತರಿದ್ದರು. ಲೇಖಕ ರೊನಿ ಅರುಣ್ ಪ್ರಸ್ತಾವನೆಗೈದು ವಿತೊರಿ ಕಾರ್ಕಳ ನಿರೂಪಿಸಿದರು.
ರಿಕ್ಷಾ ಡೈರಿ ದಿರ್ವೆಂ ಕೊಂಕಣಿ ಮಾಸಿಕದಲ್ಲಿ ಪ್ರಕಟವಾದ 44 ಲೇಖನಗಳ ಸಂಗ್ರಹ. ಕಲಾವಿದ ವಿಲ್ಸನ್ ಕಯ್ಯಾರ್ ಮುಖಪುಟ ರಚಿಸಿದ್ದಾರೆ. ಈ ಮೊದಲು ʻಬಿಡಾರ್ʼ ಕಥಾಸಂಕಲನ ಹಾಗೂ ʻಥಕಾನಾತ್‌ಲ್ಲೊ ಝುಜಾರಿʼ (ಜೀವನ ಚರಿತ್ರೆ) ಪುಸ್ತಕಗಳನ್ನು ರೊನಿ ಅರುಣ್ ಬರೆದಿದ್ದು ʻಥಕಾನಾತ್‌ಲ್ಲೊ ಝುಜಾರಿʼ ಪುಸ್ತಕಕ್ಕೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಲಭಿಸಿದೆ. ರಿಕ್ಷಾಡ ಡೈರಿ ಪುಸ್ತಕದ ರಿಯಾಯಿತಿ ಬೆಲೆ 100/- ಮಾತ್ರ. ಪುಸ್ತಕಕ್ಕಾಗಿ ಮಾಂಡ್ ಸೊಭಾಣ್ ಕಚೇರಿ ಅಥವಾ ಲೇಖಕರನ್ನು ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು