10:37 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ನಂಜನಗೂಡು ನಾಗರಿಕ ವೇದಿಕೆಯಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ನುಡಿ ನಮನ

13/05/2024, 22:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಾಗರಿಕ ವೇದಿಕೆ ವತಿಯಿಂದ ‍ಚಾಮರಾಜನಗರ ಲೋಕಸಭಾ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ನುಡಿ ನಮನ ಕಾರ್ಯಕ್ರಮವನ್ನು ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು.
ನುಡಿ ನಮನ ಸಲ್ಲಿಸಿ, ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿದರು. ನಾನು ಇವತ್ತು ವಕೀಲ, ಕಾನೂನು ವಿದ್ಯಾರ್ಥಿಯಾಗಿದ್ದಿನಿ ಎಂದರೆ ಅದಕ್ಕೆ ಪ್ರಸಾದ್ ಸಾಹೇಬರ ಸಲಹೆ ಸೂಚನೆ ಕಾರಣ. ಅವರ ಅಗಲಿಕೆ ನಮ್ಮ ರಾಜ್ಯ, ನಮ್ಮ ತಾಲ್ಲೂಕಿಗೆ ನಷ್ಟ ಉಂಟುಮಾಡಿದೆ.‌ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ ಎಂದರು.


ಬಳಿಕ ಚಿಂತಕ ದೇವನೂರು ಶಂಕರ್ ಮಾತನಾಡಿ, ರಾಜ್ಯ ಕಂಡ ಅಪರೂಪದ ರಾಜಕಾರಣಿ ಶ್ರೀನಿವಾಸ್ ಪ್ರಸಾದ್ ರವರು, ಬುದ್ಧ, ಬಸವ ,ಅಂಬೇಡ್ಕರ್ ರವರ, ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡಿದ್ದರು. ಹಿಂದುಳಿದ ವರ್ಗಗಳ, ದಲಿತರ ಮತ್ತು ಶೋಷಿತರ ಗಟ್ಟಿ ಧ್ವನಿಯಾಗಿದ್ದರು ಆದರೆ ಎಂದು ಕೂಡ ದ್ವೇಷ ರಾಜಕಾರಣ ಮಾಡಲಿಲ್ಲ. ತಮ್ಮ ಜೀವನವನ್ನು ಸಮಾಜಕಾಗಿ ಅರ್ಪಿಸಿಕೊಂಡಿದ್ದರು. ಎಲ್ಲರನ್ನೂ ಪ್ರೀತಿಸುತ್ತಿದ್ದರು.
ಮಾನವ ಸಂಬಂಧಗಳು ಗಟ್ಟಿಗೋಳ್ಳಬೇಕಾದರೆ ಪ್ರೀತಿ, ಅಂತಃಕರಣ, ಮೈತ್ರಿಯಿಂದ ಸಾಧ್ಯ ಎಂದು ನಂಬಿದ್ದರು ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಹರವೆ ಮಠದ ಶ್ರೀಗಳಾದ ಸರ್ಪ ಭೂಷಣ ಸ್ವಾಮೀಜಿ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬಿಜೆಪಿ ಮುಖಂಡ ಎಸ್.ಮಹದೇವಯ್ಯ ಸೇರಿದಂತೆ ನಾಗರಿಕ ವೇದಿಕೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು