10:36 AM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ನಂಜನಗೂಡು ನಾಗರಿಕ ವೇದಿಕೆಯಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ನುಡಿ ನಮನ

13/05/2024, 22:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಾಗರಿಕ ವೇದಿಕೆ ವತಿಯಿಂದ ‍ಚಾಮರಾಜನಗರ ಲೋಕಸಭಾ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ನುಡಿ ನಮನ ಕಾರ್ಯಕ್ರಮವನ್ನು ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು.
ನುಡಿ ನಮನ ಸಲ್ಲಿಸಿ, ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿದರು. ನಾನು ಇವತ್ತು ವಕೀಲ, ಕಾನೂನು ವಿದ್ಯಾರ್ಥಿಯಾಗಿದ್ದಿನಿ ಎಂದರೆ ಅದಕ್ಕೆ ಪ್ರಸಾದ್ ಸಾಹೇಬರ ಸಲಹೆ ಸೂಚನೆ ಕಾರಣ. ಅವರ ಅಗಲಿಕೆ ನಮ್ಮ ರಾಜ್ಯ, ನಮ್ಮ ತಾಲ್ಲೂಕಿಗೆ ನಷ್ಟ ಉಂಟುಮಾಡಿದೆ.‌ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ ಎಂದರು.


ಬಳಿಕ ಚಿಂತಕ ದೇವನೂರು ಶಂಕರ್ ಮಾತನಾಡಿ, ರಾಜ್ಯ ಕಂಡ ಅಪರೂಪದ ರಾಜಕಾರಣಿ ಶ್ರೀನಿವಾಸ್ ಪ್ರಸಾದ್ ರವರು, ಬುದ್ಧ, ಬಸವ ,ಅಂಬೇಡ್ಕರ್ ರವರ, ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡಿದ್ದರು. ಹಿಂದುಳಿದ ವರ್ಗಗಳ, ದಲಿತರ ಮತ್ತು ಶೋಷಿತರ ಗಟ್ಟಿ ಧ್ವನಿಯಾಗಿದ್ದರು ಆದರೆ ಎಂದು ಕೂಡ ದ್ವೇಷ ರಾಜಕಾರಣ ಮಾಡಲಿಲ್ಲ. ತಮ್ಮ ಜೀವನವನ್ನು ಸಮಾಜಕಾಗಿ ಅರ್ಪಿಸಿಕೊಂಡಿದ್ದರು. ಎಲ್ಲರನ್ನೂ ಪ್ರೀತಿಸುತ್ತಿದ್ದರು.
ಮಾನವ ಸಂಬಂಧಗಳು ಗಟ್ಟಿಗೋಳ್ಳಬೇಕಾದರೆ ಪ್ರೀತಿ, ಅಂತಃಕರಣ, ಮೈತ್ರಿಯಿಂದ ಸಾಧ್ಯ ಎಂದು ನಂಬಿದ್ದರು ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಹರವೆ ಮಠದ ಶ್ರೀಗಳಾದ ಸರ್ಪ ಭೂಷಣ ಸ್ವಾಮೀಜಿ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬಿಜೆಪಿ ಮುಖಂಡ ಎಸ್.ಮಹದೇವಯ್ಯ ಸೇರಿದಂತೆ ನಾಗರಿಕ ವೇದಿಕೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು