6:11 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನಂಜನಗೂಡು ನಾಗರಿಕ ವೇದಿಕೆಯಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ನುಡಿ ನಮನ

13/05/2024, 22:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಾಗರಿಕ ವೇದಿಕೆ ವತಿಯಿಂದ ‍ಚಾಮರಾಜನಗರ ಲೋಕಸಭಾ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ನುಡಿ ನಮನ ಕಾರ್ಯಕ್ರಮವನ್ನು ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು.
ನುಡಿ ನಮನ ಸಲ್ಲಿಸಿ, ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿದರು. ನಾನು ಇವತ್ತು ವಕೀಲ, ಕಾನೂನು ವಿದ್ಯಾರ್ಥಿಯಾಗಿದ್ದಿನಿ ಎಂದರೆ ಅದಕ್ಕೆ ಪ್ರಸಾದ್ ಸಾಹೇಬರ ಸಲಹೆ ಸೂಚನೆ ಕಾರಣ. ಅವರ ಅಗಲಿಕೆ ನಮ್ಮ ರಾಜ್ಯ, ನಮ್ಮ ತಾಲ್ಲೂಕಿಗೆ ನಷ್ಟ ಉಂಟುಮಾಡಿದೆ.‌ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ ಎಂದರು.


ಬಳಿಕ ಚಿಂತಕ ದೇವನೂರು ಶಂಕರ್ ಮಾತನಾಡಿ, ರಾಜ್ಯ ಕಂಡ ಅಪರೂಪದ ರಾಜಕಾರಣಿ ಶ್ರೀನಿವಾಸ್ ಪ್ರಸಾದ್ ರವರು, ಬುದ್ಧ, ಬಸವ ,ಅಂಬೇಡ್ಕರ್ ರವರ, ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡಿದ್ದರು. ಹಿಂದುಳಿದ ವರ್ಗಗಳ, ದಲಿತರ ಮತ್ತು ಶೋಷಿತರ ಗಟ್ಟಿ ಧ್ವನಿಯಾಗಿದ್ದರು ಆದರೆ ಎಂದು ಕೂಡ ದ್ವೇಷ ರಾಜಕಾರಣ ಮಾಡಲಿಲ್ಲ. ತಮ್ಮ ಜೀವನವನ್ನು ಸಮಾಜಕಾಗಿ ಅರ್ಪಿಸಿಕೊಂಡಿದ್ದರು. ಎಲ್ಲರನ್ನೂ ಪ್ರೀತಿಸುತ್ತಿದ್ದರು.
ಮಾನವ ಸಂಬಂಧಗಳು ಗಟ್ಟಿಗೋಳ್ಳಬೇಕಾದರೆ ಪ್ರೀತಿ, ಅಂತಃಕರಣ, ಮೈತ್ರಿಯಿಂದ ಸಾಧ್ಯ ಎಂದು ನಂಬಿದ್ದರು ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಹರವೆ ಮಠದ ಶ್ರೀಗಳಾದ ಸರ್ಪ ಭೂಷಣ ಸ್ವಾಮೀಜಿ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬಿಜೆಪಿ ಮುಖಂಡ ಎಸ್.ಮಹದೇವಯ್ಯ ಸೇರಿದಂತೆ ನಾಗರಿಕ ವೇದಿಕೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು