7:27 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕೊರೊನಾ ಭೀತಿ; ಆಗಸ್ಟ್ 30ರ ವರೆಗೆ ಗಡಿಯಲ್ಲಿನ ಮದ್ಯದಂಗಡಿಗಳು ಬಂದ್: ಜಿಲ್ಲಾಧಿಕಾರಿ ಆದೇಶ

18/08/2021, 09:37

ಮಂಗಳೂರು (reporterkarnataka.com:
ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಬಿಸಿರುವುದ ಹಿನ್ನೆಲೆಯಲ್ಲಿ ಕೊರೊನಾ ತಡೆಗಟ್ಟುವ ಅಂಗವಾಗಿ ಗಡಿಭಾಗದ ಮದ್ಯದಂಗಡಿಗಳನ್ನು ಆಗಸ್ಟ್ 30ರ ವರೆಗೆ ಬಂದ್ ಮಾಡಲಾಗಿದೆ.

ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ನೆರೆಯ ಕೇರಳ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆಯನ್ನು ಪರಿಗಣಿಸಿ ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ

ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ 19 ಗ್ರಾಮಗಳ (26 ಐಎಂಎಲ್ ಹಾಗೂ 5 ಶೇಂದಿ) ಮದ್ಯದಂಗಡಿಗಳನ್ನು ಆಗಸ್ಟ್ 1ರಿಂದ 15ರವರೆಗೆ ಮುಚ್ಚಲು ಈಗಾಗಲೇ ಆದೇಶಿಸಲಾಗಿರುತ್ತದೆ.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತ 1073 ರ ಕಲಂ 11 (3) ಹಾಗೂ ಕರ್ನಾಟಕಅಬಕಾರಿ (ಸನ್ನದುಗಳ ಸಾಮಾನ್ಯ ಪರತ್ತುಗಳು) ಕಾಯ್ದೆ 1965 ನಿಯಮ 21(1) ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಗಾಗಲೇ ಹೊರಡಿಸಿರುವ ಆದೇಶವನ್ನು ಆಗಸ್ಟ್ 16 ರಿಂದ 30ರ ವರೆಗೆ ಮುಂದುವರಿಸಲಾಗಿದ್ದು, ಆ.30ರ ವರೆಗೆ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ. 
                                 

ಇತ್ತೀಚಿನ ಸುದ್ದಿ

ಜಾಹೀರಾತು