2:59 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ನಂಜನಗೂಡು: ಗಂಧದ ಕಡ್ಡಿ ತಯಾರಿಕಾ ಘಟಕಕ್ಕೆ ಬೆಂಕಿ; ಲಕ್ಷಾಂತರ ಮೌಲ್ಯದ ಸೊತ್ತು ನಾಶ

14/05/2024, 20:29

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಳ್ಳಂ ಬೆಳಗ್ಗೆಯೇ ಗಂಧದ ಕಡ್ಡಿ ತಯಾರಿಕಾ ಘಟಕವೊಂದು ಹೊತ್ತಿ ಉರಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ಪಟ್ಟಣದ ಉರ್ದು ಸ್ಕೂಲ್ ಹಿಂಭಾಗದಲ್ಲಿ ಲ್ಲಿರುವ ಮುಸ್ಲಿಂ ಬ್ಲಾಕ್ ನಲ್ಲಿ ಘಟನೆ ನಡೆದಿದೆ. ರಫೀಕ್ ಎಂಬುವರಿಗೆ ಸೇರಿದ ಗಂಧದಕಡ್ಡಿ ಫ್ಯಾಕ್ಟರಿಯಲ್ಲಿ
ಇದ್ದಕ್ಕಿದ್ದಂತೆ ಬೆಳಿಗ್ಗೆ 5 ಗಂಟೆ ಸಮಯಕ್ಕೆ ದಟ್ಟವಾದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ.


ದಟ್ಟವಾದ ಬೆಂಕಿಯಿಂದಾಗಿ ಫ್ಯಾಕ್ಟರಿಯಲ್ಲಿದ್ದ ಮೂರು ಗಂಧದ ಕಡ್ಡಿ ತಯಾರು ಮಾಡುವ ಮಿಷನ್ ಗಳು ಸೇರಿದಂತೆ ಗಂಧದಕಡ್ಡಿ ತಯಾರು ಮಾಡುವ ಉತ್ಪನ್ನಗಳು ಗಂಧದಕಡ್ಡಿಯೂ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಅಲ್ಲದೆ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಮನೆಗಳಿಗೂ ತಗುಲಿ ಗೃಹಪಯೋಗಿ ವಸ್ತುಗಳು ಸಹ ಸುಟ್ಟು ಕರಗಕಲಾಗಿ ನಷ್ಟ ಉಂಟಾಗಿದೆ.
ಬೆಂಕಿ ನಂದಿಸಲು ಅಕ್ಕಪಕ್ಕದ ಹಾಗೂ ಮೊಹಲ್ಲಾದ ನಿವಾಸಿಗಳು ಹರಸಾಹಸ ಪಟ್ಟರು ಯಾವುದೇ ಪ್ರಯೋಜನವಾಗಿಲ್ಲ.
ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ಆಗಬಹುದಾದ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು