2:40 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ನಂಜನಗೂಡು: ಗಂಧದ ಕಡ್ಡಿ ತಯಾರಿಕಾ ಘಟಕಕ್ಕೆ ಬೆಂಕಿ; ಲಕ್ಷಾಂತರ ಮೌಲ್ಯದ ಸೊತ್ತು ನಾಶ

14/05/2024, 20:29

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಳ್ಳಂ ಬೆಳಗ್ಗೆಯೇ ಗಂಧದ ಕಡ್ಡಿ ತಯಾರಿಕಾ ಘಟಕವೊಂದು ಹೊತ್ತಿ ಉರಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ಪಟ್ಟಣದ ಉರ್ದು ಸ್ಕೂಲ್ ಹಿಂಭಾಗದಲ್ಲಿ ಲ್ಲಿರುವ ಮುಸ್ಲಿಂ ಬ್ಲಾಕ್ ನಲ್ಲಿ ಘಟನೆ ನಡೆದಿದೆ. ರಫೀಕ್ ಎಂಬುವರಿಗೆ ಸೇರಿದ ಗಂಧದಕಡ್ಡಿ ಫ್ಯಾಕ್ಟರಿಯಲ್ಲಿ
ಇದ್ದಕ್ಕಿದ್ದಂತೆ ಬೆಳಿಗ್ಗೆ 5 ಗಂಟೆ ಸಮಯಕ್ಕೆ ದಟ್ಟವಾದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ.


ದಟ್ಟವಾದ ಬೆಂಕಿಯಿಂದಾಗಿ ಫ್ಯಾಕ್ಟರಿಯಲ್ಲಿದ್ದ ಮೂರು ಗಂಧದ ಕಡ್ಡಿ ತಯಾರು ಮಾಡುವ ಮಿಷನ್ ಗಳು ಸೇರಿದಂತೆ ಗಂಧದಕಡ್ಡಿ ತಯಾರು ಮಾಡುವ ಉತ್ಪನ್ನಗಳು ಗಂಧದಕಡ್ಡಿಯೂ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಅಲ್ಲದೆ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಮನೆಗಳಿಗೂ ತಗುಲಿ ಗೃಹಪಯೋಗಿ ವಸ್ತುಗಳು ಸಹ ಸುಟ್ಟು ಕರಗಕಲಾಗಿ ನಷ್ಟ ಉಂಟಾಗಿದೆ.
ಬೆಂಕಿ ನಂದಿಸಲು ಅಕ್ಕಪಕ್ಕದ ಹಾಗೂ ಮೊಹಲ್ಲಾದ ನಿವಾಸಿಗಳು ಹರಸಾಹಸ ಪಟ್ಟರು ಯಾವುದೇ ಪ್ರಯೋಜನವಾಗಿಲ್ಲ.
ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ಆಗಬಹುದಾದ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು