4:41 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ನಂಜನಗೂಡು: ಗಂಧದ ಕಡ್ಡಿ ತಯಾರಿಕಾ ಘಟಕಕ್ಕೆ ಬೆಂಕಿ; ಲಕ್ಷಾಂತರ ಮೌಲ್ಯದ ಸೊತ್ತು ನಾಶ

14/05/2024, 20:29

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಳ್ಳಂ ಬೆಳಗ್ಗೆಯೇ ಗಂಧದ ಕಡ್ಡಿ ತಯಾರಿಕಾ ಘಟಕವೊಂದು ಹೊತ್ತಿ ಉರಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ಪಟ್ಟಣದ ಉರ್ದು ಸ್ಕೂಲ್ ಹಿಂಭಾಗದಲ್ಲಿ ಲ್ಲಿರುವ ಮುಸ್ಲಿಂ ಬ್ಲಾಕ್ ನಲ್ಲಿ ಘಟನೆ ನಡೆದಿದೆ. ರಫೀಕ್ ಎಂಬುವರಿಗೆ ಸೇರಿದ ಗಂಧದಕಡ್ಡಿ ಫ್ಯಾಕ್ಟರಿಯಲ್ಲಿ
ಇದ್ದಕ್ಕಿದ್ದಂತೆ ಬೆಳಿಗ್ಗೆ 5 ಗಂಟೆ ಸಮಯಕ್ಕೆ ದಟ್ಟವಾದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ.


ದಟ್ಟವಾದ ಬೆಂಕಿಯಿಂದಾಗಿ ಫ್ಯಾಕ್ಟರಿಯಲ್ಲಿದ್ದ ಮೂರು ಗಂಧದ ಕಡ್ಡಿ ತಯಾರು ಮಾಡುವ ಮಿಷನ್ ಗಳು ಸೇರಿದಂತೆ ಗಂಧದಕಡ್ಡಿ ತಯಾರು ಮಾಡುವ ಉತ್ಪನ್ನಗಳು ಗಂಧದಕಡ್ಡಿಯೂ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಅಲ್ಲದೆ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಮನೆಗಳಿಗೂ ತಗುಲಿ ಗೃಹಪಯೋಗಿ ವಸ್ತುಗಳು ಸಹ ಸುಟ್ಟು ಕರಗಕಲಾಗಿ ನಷ್ಟ ಉಂಟಾಗಿದೆ.
ಬೆಂಕಿ ನಂದಿಸಲು ಅಕ್ಕಪಕ್ಕದ ಹಾಗೂ ಮೊಹಲ್ಲಾದ ನಿವಾಸಿಗಳು ಹರಸಾಹಸ ಪಟ್ಟರು ಯಾವುದೇ ಪ್ರಯೋಜನವಾಗಿಲ್ಲ.
ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ಆಗಬಹುದಾದ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು