12:27 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ: ಅಗತ್ಯ ಜಮೀನು ವಶಪಡಿಸುವ ಕುರಿತು ನಾಳೆ ಸಭೆ

18/08/2021, 09:52

ಮಂಗಳೂರು (reporterkarnataka.com.): ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್‍ನ ಅಧ್ಯಕ್ಷ ಡಿ.ಎಸ್ ವೀರಯ್ಯ ಅವರು ಇದೇ ಆಗಸ್ಟ್ 18 ರಿಂದ 20 ರವರೆಗೆ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು, ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸುವ ಕುರಿತು ಆ.19ರಂದು ಸಭೆ ನಡೆಯಲಿದೆ.

ವೀರಯ್ಯ ಅವರು ಆಗಸ್ಟ್‌ 18ರ ಸಂಜೆ 6.10ಕ್ಕೆ ಮಂಗಳೂರಿಗೆ ಆಗಮಿಸಿ  ವಾಸ್ತವ್ಯ ಮಾಡುವರು. ಆಗಸ್ಟ್ 19ರ ಗುರುವಾರ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿಯವರು, ಮಹಾನಗರಪಾಲಿಕೆ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕೆ.ಐ.ಎ.ಡಿ.ಬಿ ಅಧಿಕಾರಿಗಳು ಹಾಗೂ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲು ಅಗತ್ಯವಿರುವ ಜಮೀನು ನೀಡುವ ಅಥವಾ ವಶಪಡಿಸಿಕೊಳ್ಳುವ ಬಗ್ಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಭಾಗವಹಿಸುವರು. 

ಮಧ್ಯಾಹ್ನ 12.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ಜಿಲ್ಲಾ ಲಾರಿ ಮಾಲಿಕರೊಂದಿಗೆ ಸಭೆ ನಡೆಸುವರು. ಸಂಜೆ 4 ಗಂಟೆಗೆ ಮಂಗಳೂರು ಬಂದರಿಗೆ ಭೇಟಿ ನೀಡಿ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಪರಿಶೀಲಿಸಲಿಸಿ, ಮಂಗಳೂರಿನಲ್ಲಿ ವಾಸ್ತವ್ಯ ಮಾಡುವರು. 
ಆಗಸ್ಟ್ 20ರ ಬೆಳಗ್ಗೆ 11.30ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿ ಕಚೇರಿಯ ಪ್ರಕಟಣೆ ತಿಳಿಸಿದೆ.   

ಇತ್ತೀಚಿನ ಸುದ್ದಿ

ಜಾಹೀರಾತು