4:41 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಹುಬ್ಬಳ್ಳಿ: ಮತ್ತೊಬ್ಬ ಪಾಗಲ್ ಪ್ರೇಮಿಯಿಂದ ಬೆಳ್ಳಂಬೆಳಗೆ ಯುವತಿಯ ಬರ್ಬರ ಹತ್ಯೆ; ಆರೋಪಿ ಪರಾರಿ

15/05/2024, 13:12

ನೇಹಾ ಎಸ್. ಎನ್. ಪಾಟೀಲ್ ಹುಬ್ಬಳ್ಳಿ

info.reporterkarnataka@gmail.com

ವಿದ್ಯಾರ್ಥಿ ನೇಹಾ ಹಿರೇಮಠ ಬರ್ಬರ ಹತ್ಯೆ ಇನ್ನೂ ಹಸಿ ಹಸಿಯಾಗಿರುವಾಗಲೇ ಹುಚ್ಚು ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಕೊಲೆಗೀಡಾದ ನತದೃಷ್ಟೆಯನ್ನು 21ರ ಹರೆಯದ ವೀರಾಪುರ ಓಣಿಯ ನಿವಾಸಿ ಅಂಜಲಿ ಮೋಹನ ಅಂಬಿಗೇರ ಎಂದು ತಿಳಿದು ಬಂದಿದೆ. ಕೊಲೆ ಮಾಡಿದ ಆರೋಲಿ ಯಲ್ಲಾಪುರ ಓಣಿಯ ಗಿರೀಶ ಸಾವಂತ ಎಂದು ಗುರುತಿಸಲಾಗಿದೆ.
ಗಿರೀಶ್ ಸಾಮಂತ ಅಂಜಲಿಯನ್ನು ಏಕಮುಖ ಪ್ರೀತಿಸುತ್ತಿದ್ದ. ಆದರೆ ಅಂಜಲಿ ಪ್ರೀತಿ ನಿರಾಕರಿಸಿದ್ದಳು. ಇದರಿಂದ ಕ್ರೋಧಗೊಂಡ ಗೌರೀಶ ಬುಧವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಂಜಲಿಯ ಮನೆಗೆ ಹೋಗಿ ಬಾಗಿಲು ತಟ್ಟಿದ್ದಾನೆ. ಆಗ ಅಂಜಲಿಯೇ ಬಾಗಿಲು ತೆರೆದಾಗ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಕೃತ್ಯ ಎಸಗಿದ ಗಿರೀಶ ಪರಾರಿಯಾಗಿದ್ದಾನೆ. ಆತನ ತಾಯಿ ಮನೆ ಮನೆಯ ಪಾತ್ರೆ ತೊಳೆಯುವ ಕೆಲಸ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಬೆಂಡಿಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು