2:58 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಹುಬ್ಬಳ್ಳಿ: ಮತ್ತೊಬ್ಬ ಪಾಗಲ್ ಪ್ರೇಮಿಯಿಂದ ಬೆಳ್ಳಂಬೆಳಗೆ ಯುವತಿಯ ಬರ್ಬರ ಹತ್ಯೆ; ಆರೋಪಿ ಪರಾರಿ

15/05/2024, 13:12

ನೇಹಾ ಎಸ್. ಎನ್. ಪಾಟೀಲ್ ಹುಬ್ಬಳ್ಳಿ

info.reporterkarnataka@gmail.com

ವಿದ್ಯಾರ್ಥಿ ನೇಹಾ ಹಿರೇಮಠ ಬರ್ಬರ ಹತ್ಯೆ ಇನ್ನೂ ಹಸಿ ಹಸಿಯಾಗಿರುವಾಗಲೇ ಹುಚ್ಚು ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಕೊಲೆಗೀಡಾದ ನತದೃಷ್ಟೆಯನ್ನು 21ರ ಹರೆಯದ ವೀರಾಪುರ ಓಣಿಯ ನಿವಾಸಿ ಅಂಜಲಿ ಮೋಹನ ಅಂಬಿಗೇರ ಎಂದು ತಿಳಿದು ಬಂದಿದೆ. ಕೊಲೆ ಮಾಡಿದ ಆರೋಲಿ ಯಲ್ಲಾಪುರ ಓಣಿಯ ಗಿರೀಶ ಸಾವಂತ ಎಂದು ಗುರುತಿಸಲಾಗಿದೆ.
ಗಿರೀಶ್ ಸಾಮಂತ ಅಂಜಲಿಯನ್ನು ಏಕಮುಖ ಪ್ರೀತಿಸುತ್ತಿದ್ದ. ಆದರೆ ಅಂಜಲಿ ಪ್ರೀತಿ ನಿರಾಕರಿಸಿದ್ದಳು. ಇದರಿಂದ ಕ್ರೋಧಗೊಂಡ ಗೌರೀಶ ಬುಧವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಂಜಲಿಯ ಮನೆಗೆ ಹೋಗಿ ಬಾಗಿಲು ತಟ್ಟಿದ್ದಾನೆ. ಆಗ ಅಂಜಲಿಯೇ ಬಾಗಿಲು ತೆರೆದಾಗ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಕೃತ್ಯ ಎಸಗಿದ ಗಿರೀಶ ಪರಾರಿಯಾಗಿದ್ದಾನೆ. ಆತನ ತಾಯಿ ಮನೆ ಮನೆಯ ಪಾತ್ರೆ ತೊಳೆಯುವ ಕೆಲಸ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಬೆಂಡಿಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು