ಇತ್ತೀಚಿನ ಸುದ್ದಿ
ಹುಬ್ಬಳ್ಳಿ: ಮತ್ತೊಬ್ಬ ಪಾಗಲ್ ಪ್ರೇಮಿಯಿಂದ ಬೆಳ್ಳಂಬೆಳಗೆ ಯುವತಿಯ ಬರ್ಬರ ಹತ್ಯೆ; ಆರೋಪಿ ಪರಾರಿ
15/05/2024, 13:12
ನೇಹಾ ಎಸ್. ಎನ್. ಪಾಟೀಲ್ ಹುಬ್ಬಳ್ಳಿ
info.reporterkarnataka@gmail.com
ವಿದ್ಯಾರ್ಥಿ ನೇಹಾ ಹಿರೇಮಠ ಬರ್ಬರ ಹತ್ಯೆ ಇನ್ನೂ ಹಸಿ ಹಸಿಯಾಗಿರುವಾಗಲೇ ಹುಚ್ಚು ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಕೊಲೆಗೀಡಾದ ನತದೃಷ್ಟೆಯನ್ನು 21ರ ಹರೆಯದ ವೀರಾಪುರ ಓಣಿಯ ನಿವಾಸಿ ಅಂಜಲಿ ಮೋಹನ ಅಂಬಿಗೇರ ಎಂದು ತಿಳಿದು ಬಂದಿದೆ. ಕೊಲೆ ಮಾಡಿದ ಆರೋಲಿ ಯಲ್ಲಾಪುರ ಓಣಿಯ ಗಿರೀಶ ಸಾವಂತ ಎಂದು ಗುರುತಿಸಲಾಗಿದೆ.
ಗಿರೀಶ್ ಸಾಮಂತ ಅಂಜಲಿಯನ್ನು ಏಕಮುಖ ಪ್ರೀತಿಸುತ್ತಿದ್ದ. ಆದರೆ ಅಂಜಲಿ ಪ್ರೀತಿ ನಿರಾಕರಿಸಿದ್ದಳು. ಇದರಿಂದ ಕ್ರೋಧಗೊಂಡ ಗೌರೀಶ ಬುಧವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಂಜಲಿಯ ಮನೆಗೆ ಹೋಗಿ ಬಾಗಿಲು ತಟ್ಟಿದ್ದಾನೆ. ಆಗ ಅಂಜಲಿಯೇ ಬಾಗಿಲು ತೆರೆದಾಗ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಕೃತ್ಯ ಎಸಗಿದ ಗಿರೀಶ ಪರಾರಿಯಾಗಿದ್ದಾನೆ. ಆತನ ತಾಯಿ ಮನೆ ಮನೆಯ ಪಾತ್ರೆ ತೊಳೆಯುವ ಕೆಲಸ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಬೆಂಡಿಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.














