6:12 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಮತ್ತೆ ಗತ ವೈಭವಕ್ಕೆ: ನೂತನ ಕುಲಪತಿ ಪ್ರೊ. ಧರ್ಮ ವಿಶ್ವಾಸ

16/05/2024, 21:32

ಮಂಗಳಗಂಗೋತ್ರಿ(reporterkarnataka.com): ಮಂಗಳೂರು ವಿವಿಯು ಇಂದು ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಆದರೆ ಶೀಘ್ರದಲ್ಲಿ ಅವೆಲ್ಲವನ್ನು ಮೀರಿ ಮತ್ತೆ ಹಳೆಯ ವೈಭವಕ್ಕೆ ಮರಳುತ್ತೇವೆ ಎಂದು ಮಂಗಳೂರು ವಿವಿಯ 10ನೇ ಉಪ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಪ್ರೊ. ಡಾ. ಪಿ. ಎಲ್. ಧರ್ಮ ಹೇಳಿದರು. ತಮ್ಮ ವಿದ್ಯಾರ್ಥಿ ಜೀವನದ ಹಲವು ಸವಿ ನೆನಪುಗಳನ್ನು ಹಂಚಿಕೊಂಡ ಪ್ರೊ. ಡಾ. ಪಿ. ಎಲ್. ಧರ್ಮ ನನ್ನ ವ್ಯಕ್ತಿತ್ವವನ್ನು ರೂಪಿಸಿದ್ದು ಮಂಗಳೂರು ವಿಶ್ವ ವಿದ್ಯಾನಿಲಯ, ಈ ನಿಟ್ಟಿನಲ್ಲಿ ನನ್ನ ಸ್ನೇಹಿತರ, ಅಧ್ಯಾಪಕರ ಪಾತ್ರ ಅಪಾರವಾದದು ಎಂದರು.
ಮಂಗಳೂರು ವಿಶ್ವವಿದ್ಯಾನಿಲಯದ ಅಧ್ಯಾಪಕರ ಸಂಘದ ವತಿಯಿಂದ ವಿಶ್ವವಿದ್ಯಾಲಯದ ನೂತನ ಕುಲಪತಿ, ಇದೇ ವಿವಿ ಯ ರಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರು ಪ್ರೊ. ಡಾ. ಪಿ. ಎಲ್ ಧರ್ಮ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಂಗಳೂರು ವಿವಿ ವಿವಿಧ ವಿಭಾಗಗಳ ಪ್ರಾಧ್ಯಾಪಕರುಗಳಾದ ವಿಶ್ವನಾಥ್, ರವೀಂದ್ರ ಆಚಾರಿ , ಎ. ಎಂ. ಖಾನ್, ನಾರಾಯಣ ಮತ್ತು ಪ್ರಶಾಂತ್ ನಾಯ್ಕ ನೂತನ ಕುಲಪತಿಗಳ ಜೊತೆಗಿನ ತಮ್ಮ ನಡುವಿನ ಭಾಂದವ್ಯದ ಕುರಿತು ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಅವರ ಕೊಡುಗೆ ಕುರಿತು ಮನದಾಳದ ಮಾತುಗಳನ್ನು ಹಂಚಿಕೊಂಡರು.
ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಮೋಹನ್ ಸಿಂಘೆ ಅಧ್ಯಕ್ಷತೆ ವಹಿಸಿದರು.. ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ . ದೇವೇಂದ್ರಪ್ಪ, ಹಣಕಾಸು ಅಧಿಕಾರಿ, ಪ್ರೊ ವೈ. ಸಂಗಪ್ಪ ಉಪಸ್ಥಿತರಿದ್ದರು
ಪ್ರೊ . ನಿರ್ಮಲ ಪ್ರಾರ್ಥಿಸಿದರು, ಡಾ. ಧನಂಜಯ್ ಕುಂಬ್ಳೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು