2:42 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ನಂಜನಗೂಡು: ಮನೆ ಮೇಲೆ ಮರ ಬಿದ್ದು ಸಂಪೂರ್ಣ ಜಖಂ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಬಡ ಕುಟುಂಬ ಪಾರು

16/05/2024, 22:45

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಿಂದಾಗಿ ಹಳೆಯ ಬಾರಿ ಗಾತ್ರದ ಅರಳಿ ಮರವೊಂದು ಮನೆ ಮೇಲೆ ಬಿದ್ದು ಮನೆ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಕೂದಲೆಳೆಯ ಅಂತರದಲ್ಲಿ ಬಡ ಕುಟುಂಬವೊಂದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಂಜನಗೂಡು ತಾಲೂಕಿನ ಅರಿಯೂರು ಗ್ರಾಮದಲ್ಲಿ ನಡೆದಿದೆ.
ಮಳೆ ಗಾಳಿಯಿಂದಾಗಿ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಇದ್ದಕ್ಕಿದ್ದಂತೆ ಮರದ ಬಾರಿ ಗಾತ್ರದ ಕೊಂಬೆಯೊಂದು ಮನೆಯ ಮೇಲೆ ಬೀಳುತ್ತಿದ್ದಂತೆ ಇಬ್ಬರು ಮಕ್ಕಳು ಸೇರಿದಂತೆ ವಯೋವೃದ್ದಾದಿಯಾಗಿ ಮನೆಯಿಂದ ಹೊರ ಬಂದು ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಆದರೆ ಮನೆ ಮಾತ್ರ ಸಂಪೂರ್ಣ ಜಖಂ ಗೊಂಡಿದೆ.
ಸುಮಾರು 90 ವರ್ಷದ ವಯೋ ವೃದ್ಧ ವೆಂಕಟಯ್ಯ ಆತನ ಪತ್ನಿ ಹಾಗೂ ಮೊಮ್ಮಗಳಾದ ಪದ್ಮ ಮತ್ತು ಅವಳ ಎರಡು ಮಕ್ಕಳು ಮನೆಯಲ್ಲಿ ವಾಸವಾಗಿದ್ದರು.
ಕಡು ಬಡವರಾದ ವೆಂಕಟಯ್ಯ ಕುಟುಂಬ ಒಂದು ಸಣ್ಣ ಮನೆಯಲ್ಲಿ ವಾಸವಿರುತ್ತಾರೆ. ಅದೇ ಸಣ್ಣ ಮನೆಯಲ್ಲಿ ಮೊಮ್ಮಗಳು ಪದ್ಮ ಜೀವನೋಪಾಯಕ್ಕಾಗಿ ಸಾಲ ಸೋಲ ಮಾಡಿ ಒಂದು ಪುಟ್ಟ ಅಂಗಡಿಯನ್ನು ಸಹ ನಡೆಸುತ್ತಿರುತ್ತಾಳೆ.
ಅಂಗಡಿಯಲ್ಲಿ ಜೆರಾಕ್ಸ್ ಮಿಷನ್ , ಹೊಲಿಗೆ ಯತ್ರ, ಲ್ಯಾಪ್ಟಾಪ್ ಸೇರಿದಂತೆ ಅಂಗಡಿಯಲ್ಲಿದ್ದ ವಸ್ತುಗಳು ಸಹ ಸಂಪೂರ್ಣ ನಾಶವಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಈ ಘಟನೆಯಿಂದಾಗಿ ಮಕ್ಕಳು ಸೇರಿದಂತೆ ವಯೋವೃದ್ಧರು ಬೀದಿಗೆ ಬಿದ್ದಿದ್ದಾರೆ.
ಮರ ತೆಗೆಸುವಂತೆ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರೂ ಮರ ತೆಗೆಸದ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈ ದುರ್ಘಟನೆ ನಡೆದಿದೆ.


ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಕುಟುಂಬಸ್ಥರು ಮಾತನಾಡಿ ಮರ ತೆಗೆಸುವಂತೆ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಇಂದು ಮರ ನಮ್ಮ ಮನೆ ಮೇಲೆ ಬಿದ್ದು ಮನೆ ಹಾಗೂ ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳು ಸಂಪೂರ್ಣ ನಾಶವಾಗಿದೆ. ಇದರಿಂದಾಗಿ ಈಗ ಬೀದಿಗೆ ಬಿದ್ದು ನಮಗೆ ದಿಕ್ಕು ತೋಚದಂತಾಗಿ ನಮಗೆ ಆತ್ಮಹತ್ಯೆ ಮಾಡಿಕೊಳ್ಳುವುದು ಒಂದೇ ದಾರಿ ಎಂದು ತಮ್ಮ ಅಳಲು ತೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು