5:53 AM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಚಲಿಸುತ್ತಿದ್ದ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ದಾರುಣ ಸಾವು: ಮಾವನ ಜತೆ ಹೊಲಕ್ಕೆ ಹೋಗಿದ್ದ 8ರ ಹರೆಯದ ಪೋರ

18/05/2024, 11:07

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎಂಟು ವರ್ಷದ ಭವಿಷ್ ಎಂಬ ಬಾಲಕನೇ ಟ್ರ್ಯಾಕ್ಟರ್ ನಿಂದ ಬಿದ್ದು ರೋಟರಿಗೆ ಸಿಲುಕಿ ಸಾವನ್ನಪ್ಪಿರುವ ನತದೃಷ್ಟ ಬಾಲಕ. ಶಾಲೆ ರಜಾ ಹಿನ್ನೆಲೆಯಲ್ಲಿ ತನ್ನ ಅಜ್ಜಿ ಮನೆಗೆ ಬಾಲಕ ಬಂದಿದ್ದ. ಬಾಲಕನ ತಾಯಿ ಮಮತಾ ದೇವರಸ ಹಳ್ಳಿಯಿಂದ ಚಾಮರಾಜನಗರಕ್ಕೆ ಮದುವೆಯಾಗಿದ್ದರು.
ಶಾಲಾ ರಜೆ ಕಳೆಯಲು ತನ್ನ ಎರಡು ಮಕ್ಕಳೊಂದಿಗೆ ತಾಯಿ ಮನೆ ದೇವರಸನಹಳ್ಳಿಗೆ ಬಂದಿದ್ದರು.
ಮೃತ ಬಾಲಕನ ಸೋದರ ಮಾವ ತನ್ನ ತಂಗಿಯ ಎರಡು ಮಕ್ಕಳನ್ನು ಜಮೀನಿಗೆ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಜಮೀನಿನಲ್ಲಿ ಉಳುಮೆ ಮಾಡುವ ಸಂದರ್ಭ ಬಾಲಕ ಭವಿಷ್ ಹಾಗೂ ಆತನ ಸಹೋದರಿಯನ್ನು ಟ್ರ್ಯಾಕ್ಟರ್ ಮೇಲೆ ಕೂರಿಸಲಾಗಿದೆ.
ಟ್ರಾಕ್ಟರ್ ಉಳುಮೆ ಮಾಡುವ ಸಂದರ್ಭ ಬಾಲಕ ಭವಿಷ್ ಟ್ರ್ಯಾಕ್ಟರ್ ನಿಂದ ಆಯತಪ್ಪಿ ಕೆಳಗೆ ಬಿದ್ದು ರೋಟರಿಗೆ ಸಿಲುಕಿದಾಗ ದೇಹ ತುಂಡು ತುಂಡಾಗಿ ಬಾಲಕ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.
ಬಾಲಕನ ಮೃತ ದೇಹ ಕಂಡ ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು