9:15 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಹಳೇಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ತೀರ್ಥಕೆರೆ ನಿರ್ಮಾಣ: ಪ್ರಾರ್ಥನೆ, ಪೂಜೆ ಸಲ್ಲಿಕೆ

18/05/2024, 18:50

ಮಂಗಳೂರು(reporterkarnataka.com):ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವವುಳ್ಳ ಗುಜ್ಜರಕೆರೆಯಲ್ಲಿ ಹಳೇಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ತೀರ್ಥಕೆರೆಯ ನಿರ್ಮಾಣ ಹಾಗೂ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಈ ಕೆರೆಯ ಧಾರ್ಮಿಕ ಮತ್ತು ಸ್ಥಳ ಮಹತ್ವಕ್ಕೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮುನ್ನ ಶ್ರೀ ಮಾರಿಯಮ್ಮ ದೇವಿಯ ಸನ್ನಿಧಾನದಲ್ಲಿ ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆಯ ವತಿಯಿಂದ ಅಮ್ಮನವರಿಗೆ ಪ್ರಾರ್ಥನೆ ಮತ್ತು ಪೂಜೆಯನ್ನು ಸಲ್ಲಿಸಲಾಯಿತು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ವಿ. ಭಟ್ ಪೂಜೆ ಮತ್ತು ಪ್ರಾರ್ಥನೆಯನ್ನು ನೆರವೇರಿಸಿದರು.
ಈ ಸಂದರ್ಭ ವೇದಿಕೆಯ ಗೌರವಾಧ್ಯಕ್ಷ ಯೋಗೀಶ್ ಕುಮಾರ್ ಜೆಪ್ಪು, ಅಧ್ಯಕ್ಷ ಸಿ. ಪಿ ದಿನೇಶ್, ಉಪಾಧ್ಯಕ್ಷ ಜೆ.ಸುನಿಲ್, ಸುರೇಶ್ ಕುಮಾರ್, ಮುರುಳಿಧರ್ ಬೋಳಾರ್, ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿ ಗುಜ್ಜರಕೆರೆ, ಕೋಶಾಧಿಕಾರಿ ಜೆ.ಸುರೇಶ್, ಸ್ಥಳೀಯ ಕಾರ್ಪೂರೇಟರ್ ಭಾನುಮತಿ ಪಿ.ಎಸ್, ಸದಸ್ಯರಾದ ಕೆ.ಜ್ಞಾನೇಶ್, ರಾಜೇಶ್, ವಿಶ್ವನಾಥ್ ಅತ್ತಾವರ, ಮಾಧವ ಗುಜ್ಜರಕೆರೆ, ವಸಂತ ಶೇಣವ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಬಿ. , ಸದಸ್ಯರಾದ ಭಾಸ್ಕರ್ ರಾವ್, ಸುಭಾಷ್ ಚಂದ್ರ ಕಾಂಚನ್ ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು