12:35 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಶ್ರೀ ಶಾಂಕರ ತತ್ವಪ್ರಸಾರ ಅಭಿಯಾನ: ಸಾಮರಸ್ಯ ಸಮಾಜ ಜಾಗೃತಿ ಕಾರ್ಯಕ್ರಮ

18/05/2024, 23:00

ಬಂಟ್ವಾಳ(reporterkarnataka.com):ಶಂಕರಾಚಾರ್ಯರ ಅದ್ವೈತ ಸಿದ್ಧಾಂತದಂತೆ ಎಲ್ಲರಲ್ಲೂ ಪರಮಾತ್ಮನನ್ನು ಕಾಣಬೇಕು. ಎಲ್ಲರೂ ದೇವರ ಅಂಶಗಳೇ ಆಗಿದ್ದಾರೆ ಎಂದು ಸಾರಿದ ಶಂಕರಾಚಾರ್ಯರು ಧರ್ಮ ರಕ್ಷಣೆಗೆ ಹೊಸ ಮಾರ್ಗವನ್ನು ಹಾಕಿಕೊಟ್ಟು ಎಲ್ಲಾ ರೀತಿಯ ಭೇದಭಾವ ಅಳಿಸಿ ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಹರಿಕಾರರಾಗಿದ್ದಾರೆ‌ ಎಂದು ಧಾರ್ಮಿಕ ಪರಿಷತ್ತು ಜಿಲ್ಲಾ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ ಅಭಿಪ್ರಾಯ ಪಟ್ಟರು.
ಅವರು ಬಿ.ಸಿ.ರೋಡಿನ ಅನ್ನಪೂರ್ಣೇಶ್ವರೀ ದೇವಸ್ಥಾನ ದ ವಠಾರದಲ್ಲಿ ಸನಾತನ ಹಿಂದೂ ಧರ್ಮದ ಪುನರುತ್ಥಾನದ ಮಹಾಶಕ್ತಿಯಾಗಿ ಅವತರಿಸಿದ ಆಚಾರ್ಯ ಶಂಕರ ಭಗವತ್ಪಾದರ ಜಯಂತ್ಯುತ್ಸವದ ಅಂಗವಾಗಿ ಬಂಟ್ವಾಳ ತಾಲೂಕಿನ ಹಲವೆಡೆಗಳಲ್ಲಿ ಶ್ರೀ ಶಂಕರ ತತ್ವಪ್ರಸಾರ ಅಭಿಯಾನ ಶೃಂಗೇರಿ ಮಠ, ಅಖಿಲ ಕರ್ನಾಟ ಹಿರಿಯರ ಸೇವಾ ಪ್ರತಿಷ್ಠಾನ, ಶ್ರೀ ಶಂಕರ ಸೇವಾ ಪ್ರತಿಷ್ಠಾನ ಕೋಟೆಕಾರು ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ಶ್ರೀ ಶಾಂಕರ ತತ್ವಪ್ರಸಾರ ಅಭಿಯಾನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.
ಅನ್ನಪೂರ್ಣೇಶ್ವರಿ ದೇವಸ್ಥಾನ ದ ಆಡಳಿತ ಮಂಡಳಿ‌ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ರೊಟೇರಿಯನ್ ಪ್ರಕಾಶ ಕಾರಂತ, ಶ್ರೀಶಂಕರ ಸೇವಾ ಪ್ರತಿಷ್ಠಾನ ಬಂಟ್ವಾಳ ತಾಲೂಕು ಸಂಚಾಲಕ ಎ.ಕೃಷ್ಣ ಶರ್ಮ, ಪದಾಧಿಕಾರಿಗಳಾದ ಶಿವರಾಮ ರಾವ್ ಬೈರಿಕಟ್ಟೆ, ಜಗದೀಶ ಹೊಳ್ಳ ಬಿ.ಸಿ.ರೋಡು ಉಪಸ್ಥಿತರಿದ್ದರು.
ಉಪಾಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿ, ಪ್ರಸ್ತಾವನೆ ಗೈದರು. ಪ್ರಧಾನ ಕಾರ್ಯದರ್ಶಿ ರಾಜಾರಾಮ ಐತಾಳ್ ಕಂದೂರು ವಂದಿಸಿದರು.
ಮೇ 23ರಿಂದ ಜೂನ್ 2ರವರೆಗೆ ಸಮಾಜ ಜಾಗೃತಿ ಕಾರ್ಯಕ್ರಮ, ಧಾರ್ಮಿಕ ಸಭೆ, ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಮೇ 23ಕ್ಕೆ ಮಂಗಳಪದವು ಅಯ್ಯಪ್ಪ ಭಜನಾ ಮಂದಿರ, ಮೇ 24 ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ, ಮೇ 25 ವೆಂಕಟರಮಣ ಭಜನಾ ಮಂದಿರ ಕಡಂಬು ವಿಟ್ಲ, ಮೇ 26 ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಕಣಿಯೂರು ಕನ್ಯಾನ, ಜೂನ್1 ಅಶ್ವತ್ಥನಾರಾಯಣ ಭಜನಾ ಮಂದಿರ ಬೈರಿಕಟ್ಟೆ ಅಳಿಕೆ, ಜೂನ್2 ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಂಟ್ವಾಳದಲ್ಲಿ ಸಂಪನ್ನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು