7:21 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಶ್ರೀ ಶಾಂಕರ ತತ್ವಪ್ರಸಾರ ಅಭಿಯಾನ: ಸಾಮರಸ್ಯ ಸಮಾಜ ಜಾಗೃತಿ ಕಾರ್ಯಕ್ರಮ

18/05/2024, 23:00

ಬಂಟ್ವಾಳ(reporterkarnataka.com):ಶಂಕರಾಚಾರ್ಯರ ಅದ್ವೈತ ಸಿದ್ಧಾಂತದಂತೆ ಎಲ್ಲರಲ್ಲೂ ಪರಮಾತ್ಮನನ್ನು ಕಾಣಬೇಕು. ಎಲ್ಲರೂ ದೇವರ ಅಂಶಗಳೇ ಆಗಿದ್ದಾರೆ ಎಂದು ಸಾರಿದ ಶಂಕರಾಚಾರ್ಯರು ಧರ್ಮ ರಕ್ಷಣೆಗೆ ಹೊಸ ಮಾರ್ಗವನ್ನು ಹಾಕಿಕೊಟ್ಟು ಎಲ್ಲಾ ರೀತಿಯ ಭೇದಭಾವ ಅಳಿಸಿ ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಹರಿಕಾರರಾಗಿದ್ದಾರೆ‌ ಎಂದು ಧಾರ್ಮಿಕ ಪರಿಷತ್ತು ಜಿಲ್ಲಾ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ ಅಭಿಪ್ರಾಯ ಪಟ್ಟರು.
ಅವರು ಬಿ.ಸಿ.ರೋಡಿನ ಅನ್ನಪೂರ್ಣೇಶ್ವರೀ ದೇವಸ್ಥಾನ ದ ವಠಾರದಲ್ಲಿ ಸನಾತನ ಹಿಂದೂ ಧರ್ಮದ ಪುನರುತ್ಥಾನದ ಮಹಾಶಕ್ತಿಯಾಗಿ ಅವತರಿಸಿದ ಆಚಾರ್ಯ ಶಂಕರ ಭಗವತ್ಪಾದರ ಜಯಂತ್ಯುತ್ಸವದ ಅಂಗವಾಗಿ ಬಂಟ್ವಾಳ ತಾಲೂಕಿನ ಹಲವೆಡೆಗಳಲ್ಲಿ ಶ್ರೀ ಶಂಕರ ತತ್ವಪ್ರಸಾರ ಅಭಿಯಾನ ಶೃಂಗೇರಿ ಮಠ, ಅಖಿಲ ಕರ್ನಾಟ ಹಿರಿಯರ ಸೇವಾ ಪ್ರತಿಷ್ಠಾನ, ಶ್ರೀ ಶಂಕರ ಸೇವಾ ಪ್ರತಿಷ್ಠಾನ ಕೋಟೆಕಾರು ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ಶ್ರೀ ಶಾಂಕರ ತತ್ವಪ್ರಸಾರ ಅಭಿಯಾನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.
ಅನ್ನಪೂರ್ಣೇಶ್ವರಿ ದೇವಸ್ಥಾನ ದ ಆಡಳಿತ ಮಂಡಳಿ‌ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ರೊಟೇರಿಯನ್ ಪ್ರಕಾಶ ಕಾರಂತ, ಶ್ರೀಶಂಕರ ಸೇವಾ ಪ್ರತಿಷ್ಠಾನ ಬಂಟ್ವಾಳ ತಾಲೂಕು ಸಂಚಾಲಕ ಎ.ಕೃಷ್ಣ ಶರ್ಮ, ಪದಾಧಿಕಾರಿಗಳಾದ ಶಿವರಾಮ ರಾವ್ ಬೈರಿಕಟ್ಟೆ, ಜಗದೀಶ ಹೊಳ್ಳ ಬಿ.ಸಿ.ರೋಡು ಉಪಸ್ಥಿತರಿದ್ದರು.
ಉಪಾಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿ, ಪ್ರಸ್ತಾವನೆ ಗೈದರು. ಪ್ರಧಾನ ಕಾರ್ಯದರ್ಶಿ ರಾಜಾರಾಮ ಐತಾಳ್ ಕಂದೂರು ವಂದಿಸಿದರು.
ಮೇ 23ರಿಂದ ಜೂನ್ 2ರವರೆಗೆ ಸಮಾಜ ಜಾಗೃತಿ ಕಾರ್ಯಕ್ರಮ, ಧಾರ್ಮಿಕ ಸಭೆ, ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಮೇ 23ಕ್ಕೆ ಮಂಗಳಪದವು ಅಯ್ಯಪ್ಪ ಭಜನಾ ಮಂದಿರ, ಮೇ 24 ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ, ಮೇ 25 ವೆಂಕಟರಮಣ ಭಜನಾ ಮಂದಿರ ಕಡಂಬು ವಿಟ್ಲ, ಮೇ 26 ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಕಣಿಯೂರು ಕನ್ಯಾನ, ಜೂನ್1 ಅಶ್ವತ್ಥನಾರಾಯಣ ಭಜನಾ ಮಂದಿರ ಬೈರಿಕಟ್ಟೆ ಅಳಿಕೆ, ಜೂನ್2 ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಂಟ್ವಾಳದಲ್ಲಿ ಸಂಪನ್ನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು