2:15 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಿವಳ್ಳಿ ಕ್ರೀಡೋತ್ಸವ

19/05/2024, 00:04

ಮಂಗಳೂರು(reporterkarnataka.com): ಮಂಗಳೂರು ಶಿವಳ್ಳಿ ಸ್ಪಂದನ ಕ್ರೀಡೋತ್ಸವ 2024 ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಿತು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಆಡಳಿತ ಮುಕ್ತೇಸರ ಹಾಗೂ ಅನುವಂಶಿಗೆ ಅರ್ಚಕ ವೇದಮೂರ್ತಿ ವಾಸುದೇವ ಆಸ್ರಣ್ಣ ಉದ್ಘಾಟಿಸಿದರು.


ಮಂಗಳೂರಿನ 13 ವಲಯಗಳ ಕುಟುಂಬದ ಸದಸ್ಯರುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆದರು.
ಸಮಾರೋಪ ಸಮಾರಂಭದಲ್ಲಿ ವೇದಮೂರ್ತಿ ವೆಂಕಟರಮಣ ಆಸ್ರಣ್ಣರು ಮಾತನಾಡಿ, ಕ್ರೀಡೆಯು ಸಮಗ್ರ ಶಿವಳ್ಳಿ ಬಾಂಧವರನ್ನು ಒಗ್ಗೂಡಿಸುವಲ್ಲಿ ಮಹತ್ತರ ಹೆಜ್ಜೆಯನ್ನು ಇರಿಸಿದೆ. ಕ್ರೀಡೆಯಿಂದಲೂ ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಬಹುದು ಎಂದರು.
ಶಿವಳ್ಳಿ ಸ್ಪಂದನ ಅಧ್ಯಕ್ಷ ಕೆ.ಕೃಷ್ಣ ಭಟ್, ಸುಬ್ರಹ್ಮಣ್ಯ ಪ್ರಸಾದ್, ಮೋಹನ್ ರಾವ್ ಪಾವಂಜೆ, ಮಹಿಳಾ ಘಟಕ ಅಧ್ಯಕ್ಷೆ ರಮಾಮಣಿ, ಎಲ್ಲೂರು ರಾಮಚಂದ್ರ ಭಟ್, ದೀಪಾ ಕೆ. ಭಟ್, ಸಂಹಿತಾ ಅಲೆವೂರಾಯ, ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ಕಟೀಲು ವಲಯದ ಅಧ್ಯಕ್ಷ ಆನಂತ ಪದ್ಮನಾಭ ಆಚಾರ್ಯರು ವಂದಿಸಿದರು. ವಲಯ ಉಸ್ತುವಾರಿ ಪ್ರದೀಪ್ ಕುಮಾರ್ ರಾವ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು