11:07 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪಿ.ಎ. ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ: ಮಂಗಳೂರು ವಿವಿ ಕುಲಪತಿ ಪ್ರೊ. ಧರ್ಮ ಭಾಗಿ

19/05/2024, 00:10

ಮಂಗಳೂರು(reporterkarnataka.com): ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ ಹಾಗೂ ಉಳಿದ ಕಾಲೇಜುಗಳಿಗಿಂತ ಭಿನ್ನ ಎನ್ನುವುದನ್ನು ಸಾಬೀತುಪಡಿಸುತ್ತಿದೆ ಎಂದು
ಮಂಗಳೂರು ವಿವಿಯ ಕುಲಪತಿಗಳಾದ ಡಾ.ಪಿ.ಎಲ್. ಧರ್ಮ ಹೇಳಿದರು.


ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ 2024ರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.
ಕಾಲೇಜಿನ ವಾರ್ಷಿಕ ವರದಿಯನ್ನು ಪ್ರಾಂಶುಪಾಲರಾದ ಡಾ. ಸರ್ಫ್ರಾಝ್ ಜೆ. ಹಾಸಿಂ ಓದಿದರು. ಪಿಎಇಟಿಯ ಹಣಕಾಸು ವ್ಯವಹಾರಗಳ ಮುಖ್ಯಸ್ಥರಾದ ಅಹ್ಮದ್ ಕುಟ್ಟಿ ಕೆ., ಕಾಲೇಜ್ ನ ಖರೀದಿ ವಿಭಾಗದ ನಿರ್ದೇಶಕರಾದ ಹಾರಿಸ್ ಟಿಡಿ, ಪಿಎಇಟಿಯ ಎ.ಜಿ.ಎಂ ಶರಫುದ್ದೀನ್ ಪಿ.ಕೆ ಅಥಿತಿಗಳಾಗಿ ಆಗಮಿಸಿದರು. ಪಿ.ಎ.ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ. ರಮೀಝ್ ಕೆ, ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಸಲೀಮುಲ್ಲಾ ಖಾನ್, ಪಿ.ಎ. ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಪ್ರಾಂಶುಪಾಲರಾದ ಡಾ. ಸಜೀಶ್ ರಘುನಾಥನ್, ಪಿಎ‌ಇಟಿಯ ವಿದ್ಯಾರ್ಥಿ ಡೀನ್ ಡಾ. ಸಯ್ಯಿದ್ ಅಮೀನ್, ಉಪ ಪ್ರಾಂಶುಪಾಲರಾದ ಡಾ.ಹರಿಕೃಷ್ಣನ್ ಜಿ., ಸಿ.ಪಾಡ್ ಮುಖ್ಯಸ್ಥರಾದ ಫೈಝಲ್ ಎನ್, ಐ.ಕ್ಯೂ.ಎ.ಸಿ ಯ ಮುಖ್ಯಸ್ಥೆ ವಾಣಿಶ್ರೀ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡೆಲ್ಸಿ ಡಿ.ಸೋಜ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಪ್ತಿ ಉದ್ಯಾವರ್, ಮಾನವಿಕ ವಿಭಾಗದ ಮುಖ್ಯಸ್ಥೆ ನೂರ್ ಜಹಾನ್ ಬೇಗಂ ಹಾಗೂ ವಾರ್ಷಿಕೋತ್ಸವದ ಸಂಯೋಜಕರಾದ ಬಶೀರ್ ಅಹ್ಮದ್, ಚೈತ್ರಾ ಎನ್. ವಿ. ಮತ್ತು ಅನ್ಫಾ ನಿಶಾತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ವಿಜೇತರನ್ನು ಇದೇ ಸಂದರ್ಭ ಅಭಿನಂದಿಸಲಾಯಿತು. ಅಧ್ಯಾಪಕರಾದ ಲವೀನಾ ಡಿ. ಸೋಜ ಮತ್ತು ಅಫ್ರದತ್ ಅಮಾನ್ ಕಾರ್ಯಕ್ರಮ ನಿರೂಪಿಸಿದರೆ ವಿದ್ಯಾರ್ಥಿಗಳಾದ ಇರ್ಫಾದ್ ಪ್ರಾರ್ಥನೆ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು