9:43 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪಿ.ಎ. ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ: ಮಂಗಳೂರು ವಿವಿ ಕುಲಪತಿ ಪ್ರೊ. ಧರ್ಮ ಭಾಗಿ

19/05/2024, 00:10

ಮಂಗಳೂರು(reporterkarnataka.com): ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ ಹಾಗೂ ಉಳಿದ ಕಾಲೇಜುಗಳಿಗಿಂತ ಭಿನ್ನ ಎನ್ನುವುದನ್ನು ಸಾಬೀತುಪಡಿಸುತ್ತಿದೆ ಎಂದು
ಮಂಗಳೂರು ವಿವಿಯ ಕುಲಪತಿಗಳಾದ ಡಾ.ಪಿ.ಎಲ್. ಧರ್ಮ ಹೇಳಿದರು.


ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ 2024ರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.
ಕಾಲೇಜಿನ ವಾರ್ಷಿಕ ವರದಿಯನ್ನು ಪ್ರಾಂಶುಪಾಲರಾದ ಡಾ. ಸರ್ಫ್ರಾಝ್ ಜೆ. ಹಾಸಿಂ ಓದಿದರು. ಪಿಎಇಟಿಯ ಹಣಕಾಸು ವ್ಯವಹಾರಗಳ ಮುಖ್ಯಸ್ಥರಾದ ಅಹ್ಮದ್ ಕುಟ್ಟಿ ಕೆ., ಕಾಲೇಜ್ ನ ಖರೀದಿ ವಿಭಾಗದ ನಿರ್ದೇಶಕರಾದ ಹಾರಿಸ್ ಟಿಡಿ, ಪಿಎಇಟಿಯ ಎ.ಜಿ.ಎಂ ಶರಫುದ್ದೀನ್ ಪಿ.ಕೆ ಅಥಿತಿಗಳಾಗಿ ಆಗಮಿಸಿದರು. ಪಿ.ಎ.ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ. ರಮೀಝ್ ಕೆ, ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಸಲೀಮುಲ್ಲಾ ಖಾನ್, ಪಿ.ಎ. ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಪ್ರಾಂಶುಪಾಲರಾದ ಡಾ. ಸಜೀಶ್ ರಘುನಾಥನ್, ಪಿಎ‌ಇಟಿಯ ವಿದ್ಯಾರ್ಥಿ ಡೀನ್ ಡಾ. ಸಯ್ಯಿದ್ ಅಮೀನ್, ಉಪ ಪ್ರಾಂಶುಪಾಲರಾದ ಡಾ.ಹರಿಕೃಷ್ಣನ್ ಜಿ., ಸಿ.ಪಾಡ್ ಮುಖ್ಯಸ್ಥರಾದ ಫೈಝಲ್ ಎನ್, ಐ.ಕ್ಯೂ.ಎ.ಸಿ ಯ ಮುಖ್ಯಸ್ಥೆ ವಾಣಿಶ್ರೀ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡೆಲ್ಸಿ ಡಿ.ಸೋಜ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಪ್ತಿ ಉದ್ಯಾವರ್, ಮಾನವಿಕ ವಿಭಾಗದ ಮುಖ್ಯಸ್ಥೆ ನೂರ್ ಜಹಾನ್ ಬೇಗಂ ಹಾಗೂ ವಾರ್ಷಿಕೋತ್ಸವದ ಸಂಯೋಜಕರಾದ ಬಶೀರ್ ಅಹ್ಮದ್, ಚೈತ್ರಾ ಎನ್. ವಿ. ಮತ್ತು ಅನ್ಫಾ ನಿಶಾತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ವಿಜೇತರನ್ನು ಇದೇ ಸಂದರ್ಭ ಅಭಿನಂದಿಸಲಾಯಿತು. ಅಧ್ಯಾಪಕರಾದ ಲವೀನಾ ಡಿ. ಸೋಜ ಮತ್ತು ಅಫ್ರದತ್ ಅಮಾನ್ ಕಾರ್ಯಕ್ರಮ ನಿರೂಪಿಸಿದರೆ ವಿದ್ಯಾರ್ಥಿಗಳಾದ ಇರ್ಫಾದ್ ಪ್ರಾರ್ಥನೆ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು