6:05 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಪಿ.ಎ. ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ: ಮಂಗಳೂರು ವಿವಿ ಕುಲಪತಿ ಪ್ರೊ. ಧರ್ಮ ಭಾಗಿ

19/05/2024, 00:10

ಮಂಗಳೂರು(reporterkarnataka.com): ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ ಹಾಗೂ ಉಳಿದ ಕಾಲೇಜುಗಳಿಗಿಂತ ಭಿನ್ನ ಎನ್ನುವುದನ್ನು ಸಾಬೀತುಪಡಿಸುತ್ತಿದೆ ಎಂದು
ಮಂಗಳೂರು ವಿವಿಯ ಕುಲಪತಿಗಳಾದ ಡಾ.ಪಿ.ಎಲ್. ಧರ್ಮ ಹೇಳಿದರು.


ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ 2024ರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.
ಕಾಲೇಜಿನ ವಾರ್ಷಿಕ ವರದಿಯನ್ನು ಪ್ರಾಂಶುಪಾಲರಾದ ಡಾ. ಸರ್ಫ್ರಾಝ್ ಜೆ. ಹಾಸಿಂ ಓದಿದರು. ಪಿಎಇಟಿಯ ಹಣಕಾಸು ವ್ಯವಹಾರಗಳ ಮುಖ್ಯಸ್ಥರಾದ ಅಹ್ಮದ್ ಕುಟ್ಟಿ ಕೆ., ಕಾಲೇಜ್ ನ ಖರೀದಿ ವಿಭಾಗದ ನಿರ್ದೇಶಕರಾದ ಹಾರಿಸ್ ಟಿಡಿ, ಪಿಎಇಟಿಯ ಎ.ಜಿ.ಎಂ ಶರಫುದ್ದೀನ್ ಪಿ.ಕೆ ಅಥಿತಿಗಳಾಗಿ ಆಗಮಿಸಿದರು. ಪಿ.ಎ.ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ. ರಮೀಝ್ ಕೆ, ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಸಲೀಮುಲ್ಲಾ ಖಾನ್, ಪಿ.ಎ. ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಪ್ರಾಂಶುಪಾಲರಾದ ಡಾ. ಸಜೀಶ್ ರಘುನಾಥನ್, ಪಿಎ‌ಇಟಿಯ ವಿದ್ಯಾರ್ಥಿ ಡೀನ್ ಡಾ. ಸಯ್ಯಿದ್ ಅಮೀನ್, ಉಪ ಪ್ರಾಂಶುಪಾಲರಾದ ಡಾ.ಹರಿಕೃಷ್ಣನ್ ಜಿ., ಸಿ.ಪಾಡ್ ಮುಖ್ಯಸ್ಥರಾದ ಫೈಝಲ್ ಎನ್, ಐ.ಕ್ಯೂ.ಎ.ಸಿ ಯ ಮುಖ್ಯಸ್ಥೆ ವಾಣಿಶ್ರೀ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡೆಲ್ಸಿ ಡಿ.ಸೋಜ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಪ್ತಿ ಉದ್ಯಾವರ್, ಮಾನವಿಕ ವಿಭಾಗದ ಮುಖ್ಯಸ್ಥೆ ನೂರ್ ಜಹಾನ್ ಬೇಗಂ ಹಾಗೂ ವಾರ್ಷಿಕೋತ್ಸವದ ಸಂಯೋಜಕರಾದ ಬಶೀರ್ ಅಹ್ಮದ್, ಚೈತ್ರಾ ಎನ್. ವಿ. ಮತ್ತು ಅನ್ಫಾ ನಿಶಾತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ವಿಜೇತರನ್ನು ಇದೇ ಸಂದರ್ಭ ಅಭಿನಂದಿಸಲಾಯಿತು. ಅಧ್ಯಾಪಕರಾದ ಲವೀನಾ ಡಿ. ಸೋಜ ಮತ್ತು ಅಫ್ರದತ್ ಅಮಾನ್ ಕಾರ್ಯಕ್ರಮ ನಿರೂಪಿಸಿದರೆ ವಿದ್ಯಾರ್ಥಿಗಳಾದ ಇರ್ಫಾದ್ ಪ್ರಾರ್ಥನೆ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು