1:30 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಪಿ.ಎ. ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ: ಮಂಗಳೂರು ವಿವಿ ಕುಲಪತಿ ಪ್ರೊ. ಧರ್ಮ ಭಾಗಿ

19/05/2024, 00:10

ಮಂಗಳೂರು(reporterkarnataka.com): ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ ಹಾಗೂ ಉಳಿದ ಕಾಲೇಜುಗಳಿಗಿಂತ ಭಿನ್ನ ಎನ್ನುವುದನ್ನು ಸಾಬೀತುಪಡಿಸುತ್ತಿದೆ ಎಂದು
ಮಂಗಳೂರು ವಿವಿಯ ಕುಲಪತಿಗಳಾದ ಡಾ.ಪಿ.ಎಲ್. ಧರ್ಮ ಹೇಳಿದರು.


ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ 2024ರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.
ಕಾಲೇಜಿನ ವಾರ್ಷಿಕ ವರದಿಯನ್ನು ಪ್ರಾಂಶುಪಾಲರಾದ ಡಾ. ಸರ್ಫ್ರಾಝ್ ಜೆ. ಹಾಸಿಂ ಓದಿದರು. ಪಿಎಇಟಿಯ ಹಣಕಾಸು ವ್ಯವಹಾರಗಳ ಮುಖ್ಯಸ್ಥರಾದ ಅಹ್ಮದ್ ಕುಟ್ಟಿ ಕೆ., ಕಾಲೇಜ್ ನ ಖರೀದಿ ವಿಭಾಗದ ನಿರ್ದೇಶಕರಾದ ಹಾರಿಸ್ ಟಿಡಿ, ಪಿಎಇಟಿಯ ಎ.ಜಿ.ಎಂ ಶರಫುದ್ದೀನ್ ಪಿ.ಕೆ ಅಥಿತಿಗಳಾಗಿ ಆಗಮಿಸಿದರು. ಪಿ.ಎ.ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ. ರಮೀಝ್ ಕೆ, ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಸಲೀಮುಲ್ಲಾ ಖಾನ್, ಪಿ.ಎ. ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಪ್ರಾಂಶುಪಾಲರಾದ ಡಾ. ಸಜೀಶ್ ರಘುನಾಥನ್, ಪಿಎ‌ಇಟಿಯ ವಿದ್ಯಾರ್ಥಿ ಡೀನ್ ಡಾ. ಸಯ್ಯಿದ್ ಅಮೀನ್, ಉಪ ಪ್ರಾಂಶುಪಾಲರಾದ ಡಾ.ಹರಿಕೃಷ್ಣನ್ ಜಿ., ಸಿ.ಪಾಡ್ ಮುಖ್ಯಸ್ಥರಾದ ಫೈಝಲ್ ಎನ್, ಐ.ಕ್ಯೂ.ಎ.ಸಿ ಯ ಮುಖ್ಯಸ್ಥೆ ವಾಣಿಶ್ರೀ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡೆಲ್ಸಿ ಡಿ.ಸೋಜ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಪ್ತಿ ಉದ್ಯಾವರ್, ಮಾನವಿಕ ವಿಭಾಗದ ಮುಖ್ಯಸ್ಥೆ ನೂರ್ ಜಹಾನ್ ಬೇಗಂ ಹಾಗೂ ವಾರ್ಷಿಕೋತ್ಸವದ ಸಂಯೋಜಕರಾದ ಬಶೀರ್ ಅಹ್ಮದ್, ಚೈತ್ರಾ ಎನ್. ವಿ. ಮತ್ತು ಅನ್ಫಾ ನಿಶಾತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ವಿಜೇತರನ್ನು ಇದೇ ಸಂದರ್ಭ ಅಭಿನಂದಿಸಲಾಯಿತು. ಅಧ್ಯಾಪಕರಾದ ಲವೀನಾ ಡಿ. ಸೋಜ ಮತ್ತು ಅಫ್ರದತ್ ಅಮಾನ್ ಕಾರ್ಯಕ್ರಮ ನಿರೂಪಿಸಿದರೆ ವಿದ್ಯಾರ್ಥಿಗಳಾದ ಇರ್ಫಾದ್ ಪ್ರಾರ್ಥನೆ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು