8:32 AM Saturday18 - April 2026
ಬ್ರೇಕಿಂಗ್ ನ್ಯೂಸ್
Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮಂಗಳೂರು: 5 ದಿನಗಳ ಕಾಲ ನಡೆದ ‘ನವಲೇಖನ ಶಿಬಿರ’ ಸಮಾರೋಪ

19/05/2024, 00:19

ಮಂಗಳೂರು(reporterkarnataka.com): ಭಾರತದಲ್ಲಿ ಹಿಂದಿ ರಾಜ್ಯಭಾಷಾ ಸ್ಥಾನ ಪಡೆದಿದೆ. ಅತಿ ಹೆಚ್ಚಿನ ಜನರು ಹಿಂದಿ ಭಾಷೆ ಮಾತನಾಡಬಲ್ಲವರಾಗಿದ್ದಾರೆ. ಹಾಗಾಗಿ ಹಿಂದಿ ಭಾಷೆ ಮಾತನಾಡುವುದಕ್ಕೆ ಯಾವುದೇ ರೀತಿಯ ಸಂಕೋಚ ಇರಕೂಡದು ಎಂದು ಡಾ. ವಿದ್ಯಾಕುಮಾರ್ ಹೇಳಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಕೇಂದ್ರೀಯ ಹಿಂದಿ ವಿದೇಶಾಲಯ, ಶಿಕ್ಷಣ ಸಚಿವಾಲಯ(ಉನ್ನತ ಶಿಕ್ಷಣ ವಿಭಾಗ, ಭಾರತ ಸರ್ಕಾರ), ಮಂಗಳೂರು ವಿಶ್ವವಿದ್ಯಾನಿಲಯ, ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟ ಮತ್ತು ಆಂತರಿಕ ಗುಣಮಟ್ಟ ಖಾತರಿಕೋಶದ ಸಹಭಾಗಿತ್ವದಲ್ಲಿ ಐದು ದಿನಗಳ ಕಾಲ ನಡೆದ “ನವಲೇಖನ ಶಿಬಿರ” ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕೇಂದ್ರೀಯ ಹಿಂದಿ ವಿದೇಶಾಲಯದ ಅಧಿಕಾರಿ ಪ್ರದೀಪ್ ಕುಮಾರ್ ಮಾತನಾಡಿ, ವಿದೇಶಾಲಯದ ವತಿಯಿಂದ ಮಂಗಳೂರಿನಲ್ಲಿ ಮಾಡುತ್ತಿರುವ ಪ್ರಥಮ ಕಾರ್ಯಕ್ರಮ ಯಶಸ್ವಿಯಾಗಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಕೇಂದ್ರೀಯ ವಿದೇಶಾಲಯ ಮಂಗಳೂರು ವಿಶ್ವವಿದ್ಯಾನಿಲಯದ ಜೊತೆ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕಾಗಿ ಪ್ರಯತ್ನಿಸುತ್ತೇವೆ ಎಂದು ಆಶ್ವಾಸನೆ ನೀಡಿದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಅನುಸೂಯ ರೈ ಮಾತನಾಡಿ, ಹಲವು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಇಲ್ಲಿ ಕಲಿತಂತಹ ವಿಷಯವನ್ನು ಮುಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಸದುಪಯೋಗಪಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಈ ಕಾರ್ಯಕ್ರಮದಲ್ಲಿ ಪ್ರೊ. ಈಶ್ವರ್ ಪವಾರ್, ಕಾರ್ಯಕ್ರಮ ಸಂಯೋಜಕ ಡಾ. ನಾಗರತ್ನ ಎನ್. ರಾವ್, ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಸುಮಾ ಟಿ.ಆರ್., ನಿವೃತ್ತ ಉಪನ್ಯಾಸಕಿ ಡಾ. ಸುಧಾ ಭಟ್, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಉಪನ್ಯಾಸಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು