11:57 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಎಲೆಕ್ಷನ್: ಅನಿಲ್ ಕುಮಾರ್ ಟಿ.ಕೆ. ಹಾಗೂ ಹರ್ಷ ಗುಪ್ತ ಚುನಾವಣಾ ವೀಕ್ಷಕರಾಗಿ ನೇಮಕ

19/05/2024, 10:29

ಮಂಗಳೂರು(reporterkarnataka.com): ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈ,ಋತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆ ಭಾರತೀಯ ಚುನಾವಣಾ ಆಯೋಗವು ಹಿರಿಯ ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ.
ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಟಿ.ಕೆ. ಹಾಗೂ ಸಹಾಯಕ ಅಧಿಕಾರಿಯಾಗಿ ಮೈಸೂರು ಜಿಲ್ಲೆಯ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರುದ್ರೇಶ್ ಕೆ ಅವರನ್ನು ನೇಮಕ ಮಾಡಲಾಗಿದೆ. ಮೊ.ಸಂಖ್ಯೆ: 7204064565 ಅನ್ನು ಸಂಪಕಿಸಬಹುದು.
ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಹರ್ಷ ಗುಪ್ತ ಹಾಗೂ ಸಹಾಯಕ ಅಧಿಕಾರಿಯಾಗಿ ಮೈಸೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ. ಸುದರ್ಶನ್ ಅವರನ್ನು ನೇಮಕ ಮಾಡಲಾಗಿದೆ. ಮೊ.ಸಂಖ್ಯೆ: 7204294565 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರೂ ಆಗಿರುವ ಡಾ ಜೆ.ಸಿ ಪ್ರಕಾಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು