11:22 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವರ ದುರ್ಮರಣ; ಅಣೆಕಟ್ಟನ್ನು ಉದ್ಘಾಟಿಸಿ ವಾಪಸಾಗುತ್ತಿದ್ದಾಗ ದುರ್ಘಟನೆ

20/05/2024, 10:38

ತಬ್ರಿಜ್ಗೆ(reporterkarnataka.com): ಬೆಟ್ಟ ಪ್ರದೇಶದಲ್ಲಿ ತಾನು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ಹಿನ್ನೆಲೆಯಲ್ಲಿ
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸಂಪರ್ಕ ಕಳೆದುಕೊಂಡಿದ್ದ ಅವರ ಹೆಲಿಕಾಪ್ಟರ್ ಪತನಗೊಂಡಿದ್ದು ಪತ್ತೆಯಾಗಿದ್ದು, ಹೆಲಿಕಾಪ್ಟರ್ ನಲ್ಲಿರುವ ಯಾರೂ ಬದುಕುಳಿದಿರುವ ಸಾಧ್ಯತೆಗಳಿಲ್ಲ ಎಂದು ಅಲ್ಲಿನ ಟಿವಿ ವರದಿ ಮಾಡಿದೆ.
ಹೆಲಿಕಾಪ್ಟರ್ ಪತ್ತೆಯಾಗಿದೆ ಆದರೆ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಇರಾನ್ನ ರೆಡ್ ಕ್ರೆಸೆಂಟ್ ಮುಖ್ಯಸ್ಥರು ಹೇಳಿದ್ದಾರೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವ ಹುಸೇನ್ ಅಮಿರಾಬ್ಡೊಲ್ಲಿಯನ್ ಅವರು ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು.
ಇರಾನ್ ಅಧ್ಯಕ್ಷ ರೈಸಿ ಮತ್ತು ಅಜೆರ್ಬೈಜಾನ್ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ತಮ್ಮ ಹಂಚಿಕೆಯ ಗಡಿಯಲ್ಲಿರುವ ಕ್ವಿಜ್ ಖಲಾಸಿ ಅಣೆಕಟ್ಟನ್ನು ಉದ್ಘಾಟಿಸಿದ ನಂತರ ಅಧ್ಯಕ್ಷ ರೈಸಿ, ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್ ಮತ್ತು ಇತರ ಅಧಿಕಾರಿಗಳನ್ನು ಹೊತ್ತ ಹೆಲಿಕಾಪ್ಟರ್ ಇರಾನ್ ನಗರ ತಬ್ರಿಜ್ಗೆ ಹೊರಟಿತ್ತು. ಹೆಲಿಕಾಪ್ಟರ್ ಟೇಕ್ ಆಪ್ ಆಗಿ ಸುಮಾರು 30 ನಿಮಿಷಗಳ ನಂತರ ಸಂಪರ್ಕವನ್ನು ಕಳೆದುಕೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು