6:54 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಪಡೀಲು ಸಮೀಪ ಬೈಕಿಗೆ ಡಿಕ್ಕಿ ಹೊಡೆದು ಸವಾರ ಸಹಿತ ದೂರಕ್ಕೆ ಎಳೆದೊಯ್ದ ಕಾರು: ಸವಾರ ಮೃತ್ಯು

20/05/2024, 21:36

ಮಂಗಳೂರು(reporterkarnataka.com): ನಗರದ ಹೊರವಲಯದ ಪಡೀಲ್ ಸಮೀಪದ ಫಸ್ಟ್ ನ್ಯುರೋ ಆಸ್ಪತ್ರೆ ಸಮೀಪ ಬೈಕೊಂದಕ್ಕೆ ಡಸ್ಟರ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ನಡೆದಿದೆ.

ಸೋಮವಾರ ಮಧ್ಯಾಹ್ನ ಸುಮಾರು 13.10 ಗಂಟೆಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73 ರಸ್ತೆಯಲ್ಲಿ ಬಿ. ಸಿ. ರೋಡ್ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಡಸ್ಟರ್ ಕಾರು ಬೈಕಿಗೆ ಡಿಕ್ಕಿ ಹೊಡೆದು ಸುಮಾರು ದೂರ ಎಳೆಯಲ್ಪಟ್ಟ ಪರಿಣಾಮ ಬೈಕ್ ಸವಾರ ಹರೀಶ್(46)ಎಂಬವರು ಮೃತಪಟ್ಟಿದ್ದಾರೆ. ಕಾರಿನ ಚಾಲಕಿ ಅನಿತಾ ಅವರು ದುಡುಕುತನ ಮತ್ತು ನಿರ್ಲಕ್ಷ ತನದಿಂದ ಕಾರು ಚಲಾಯಿಸಿಕೊಂಡು ಬಂದು ಫಸ್ಟ್ ನ್ಯೂರೋ ಆಸ್ಪತ್ರೆ ಸಮೀಪ ರಸ್ತೆಯ ತೀರ ಎಡ ಬದಿಯಲ್ಲಿ ಚಲಾಯಿಸಿಕೊಂಡು ಹೋಗಿ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಅದರ ಸವಾರ ಹರೀಶ್ ಮತ್ತು ಬೈಕ್ ನೊಂದಿಗೆ ಸುಮಾರು ದೂರ ರಸ್ತೆಯ ಎಡ ಬದಿಯಲ್ಲಿ ಎಳೆದೊಯ್ದಿತ್ತು.
ಅಪಘಾತದಲ್ಲಿ ಹರೀಶ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು ಫಸ್ಟ್ ನ್ಯೂರೋ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅಲ್ಲಿಯ ವೈದ್ಯರು ಗಾಯಾಳು ಹರೀಶ್ ಅವರು ಅದಾಗಲೇ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು