2:02 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ; ಬಡವರಿಗೆ ಆರ್ಥಿಕ ಸಬಲತೆ ನೀಡುವುದೇ ಅಭಿವೃದ್ಧಿ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ

21/05/2024, 20:28

ಮಂಗಳೂರು(reporterkarnataka.com): ಬಡವರಿಗೆ ಆರ್ಥಿಕವಾಗಿ ಸಬಲತೆ ನೀಡುವುದೇ ಅಭಿವೃದ್ಧಿ ಆಗಿದೆ. ಅಭಿವೃದ್ಧಿ ಶೂನ್ಯ, ಅಭಿವೃದ್ಧಿ ಶೂನ್ಯ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶಕ್ಕೆ ಬರೀ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಬಂದರೆ ಮಾತ್ರ ಸ್ವಾತಂತ್ರ್ಯ ಬಂದಂತೆ ಎಂದು ಡಾ. ಅಂಬೇಡ್ಕರ್ ಹೇಳಿದ್ದರು ಎಂದು ಮುಖ್ಯಮಂತ್ರಿ ನೆನಪಿಸಿಕೊಂಡರು.
ಬಿಜೆಪಿ ನಾಯಕರಿಗೆ ಸುಳ್ಳು ಹೇಳುವುದು ಚಾಳಿಯಾಗಿದೆ. ಅವರ ಹೇಳಿಕೆಯಲ್ಲಿ ಹುರುಳಿಲ್ಲ. ಅವರು ಬಜೆಟ್ ಓದುವುದಿಲ್ಲ ಎಂದು ಎಂದು ಸಿದ್ದರಾಮಯ್ಯ ನುಡಿದರು.

ಗ್ಯಾರೆಂಟಿ ಯೋಜನೆಗಳನ್ನು ಸೇರಿಸಿ 1.20 ಲಕ್ಷ ಕೋಟಿ ಬಜೆಟ್ ಕೊಟ್ಟಿದ್ದೇವೆ. ಈ ಹಿಂದೆ ನೀರಾವರಿಗೆ 16 ಸಾವಿರ ಕೋಟಿ ರೂ. ಇಡಲಾಗುತ್ತಿತ್ತು. ಈ ವರ್ಷ 18 ಸಾವಿರ ಕೋಟಿ ರೂ. ಇಟ್ಟಿದ್ದೇವೆ. ನಾವು ಏನು ಮಾಡಿಲ್ಲ ಎಂದು ಬಿಜೆಪಿಯವರು ಹೇಳುವುದೆಂದರೆ ಏನು? ಎಂದು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು