9:17 AM Sunday6 - October 2024
ಬ್ರೇಕಿಂಗ್ ನ್ಯೂಸ್
ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ

ಇತ್ತೀಚಿನ ಸುದ್ದಿ

ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ

22/05/2024, 14:39

ಮಂಗಳೂರು(reporterkarnataka.com): ಜೀ ಕನ್ನಡ ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರ ಅವರಿಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ ಮಾಡಲಾಯಿತು.
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆದ ರಾಜ್ಯಮಟ್ಟದ ಚಿಣ್ಣರ ಮೇಳ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಪ್ರದಾನ ಮಾಡಿದರು.
ವೈದ್ಯರಾದಿಯಾಗಿ ಪ್ರತಿಯೊಬ್ಬರು ಜೀವನದಲ್ಲಿ ಸ್ವಲ್ಪ ಹೆಚ್ಚು ಕಡಿಮೆ ನಟನೆ ಮಾಡುತ್ತಲೇ ಚಿಕಿತ್ಸೆಯನ್ನು ನೀಡಬೇಕಾಗುತ್ತದೆ ಎಂದು ಅಭಿನಯ ತರಬೇತಿಯ ಪ್ರಾಧಾನ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಮಕ್ಕಳ ನಟನೆಯಿಂದ ಮಕ್ಕಳಿಗೂ, ಹೆತ್ತವರಿಗೂ ಖುಷಿ, ಆಕರ್ಷಣೆ ಹೆಚ್ಚಲಿದೆ ಎಂದು ಮೋಹನ ಆಳ್ವ ಹೇಳಿದರು.
ಆಳ್ವಾಸ್ ಫೌಂಡೇಶನ್ ನ ಟ್ರಸ್ಟಿ ವಿವೇಕ ಆಳ್ವ, ರಂಗ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ, ಸಂಪನ್ಮೂಲ ವ್ಯಕ್ತಿ ರಂಗ ನಿರ್ದೇಶಕಿ ಗಿರಿಜಾ ಸಿದ್ದಿ, ಪತ್ರಕರ್ತ ಜಿತೇಂದ್ರ ಕುಂದೇಶ್ವರ, ಯೋಗೀಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಉದ್ಘಾಟನಾ ಸಂದರ್ಭದಲ್ಲಿ ರಿಷಿಕಾ ಕುಂದೇಶ್ವರ ಹರಿಕಥೆ, ಉದ್ಘಾಟನಾ ರಂಗಗೀತೆ ಹಾಗೂ ವೈದೇ ಹಿಯವರ ನಾಯಿಮರಿ ನಾಟಕದ ತುಣುಕು ಪ್ರದರ್ಶಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು