6:01 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ

22/05/2024, 14:39

ಮಂಗಳೂರು(reporterkarnataka.com): ಜೀ ಕನ್ನಡ ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರ ಅವರಿಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ ಮಾಡಲಾಯಿತು.
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆದ ರಾಜ್ಯಮಟ್ಟದ ಚಿಣ್ಣರ ಮೇಳ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಪ್ರದಾನ ಮಾಡಿದರು.
ವೈದ್ಯರಾದಿಯಾಗಿ ಪ್ರತಿಯೊಬ್ಬರು ಜೀವನದಲ್ಲಿ ಸ್ವಲ್ಪ ಹೆಚ್ಚು ಕಡಿಮೆ ನಟನೆ ಮಾಡುತ್ತಲೇ ಚಿಕಿತ್ಸೆಯನ್ನು ನೀಡಬೇಕಾಗುತ್ತದೆ ಎಂದು ಅಭಿನಯ ತರಬೇತಿಯ ಪ್ರಾಧಾನ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಮಕ್ಕಳ ನಟನೆಯಿಂದ ಮಕ್ಕಳಿಗೂ, ಹೆತ್ತವರಿಗೂ ಖುಷಿ, ಆಕರ್ಷಣೆ ಹೆಚ್ಚಲಿದೆ ಎಂದು ಮೋಹನ ಆಳ್ವ ಹೇಳಿದರು.
ಆಳ್ವಾಸ್ ಫೌಂಡೇಶನ್ ನ ಟ್ರಸ್ಟಿ ವಿವೇಕ ಆಳ್ವ, ರಂಗ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ, ಸಂಪನ್ಮೂಲ ವ್ಯಕ್ತಿ ರಂಗ ನಿರ್ದೇಶಕಿ ಗಿರಿಜಾ ಸಿದ್ದಿ, ಪತ್ರಕರ್ತ ಜಿತೇಂದ್ರ ಕುಂದೇಶ್ವರ, ಯೋಗೀಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಉದ್ಘಾಟನಾ ಸಂದರ್ಭದಲ್ಲಿ ರಿಷಿಕಾ ಕುಂದೇಶ್ವರ ಹರಿಕಥೆ, ಉದ್ಘಾಟನಾ ರಂಗಗೀತೆ ಹಾಗೂ ವೈದೇ ಹಿಯವರ ನಾಯಿಮರಿ ನಾಟಕದ ತುಣುಕು ಪ್ರದರ್ಶಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು