1:49 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ

22/05/2024, 14:39

ಮಂಗಳೂರು(reporterkarnataka.com): ಜೀ ಕನ್ನಡ ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರ ಅವರಿಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ ಮಾಡಲಾಯಿತು.
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆದ ರಾಜ್ಯಮಟ್ಟದ ಚಿಣ್ಣರ ಮೇಳ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಪ್ರದಾನ ಮಾಡಿದರು.
ವೈದ್ಯರಾದಿಯಾಗಿ ಪ್ರತಿಯೊಬ್ಬರು ಜೀವನದಲ್ಲಿ ಸ್ವಲ್ಪ ಹೆಚ್ಚು ಕಡಿಮೆ ನಟನೆ ಮಾಡುತ್ತಲೇ ಚಿಕಿತ್ಸೆಯನ್ನು ನೀಡಬೇಕಾಗುತ್ತದೆ ಎಂದು ಅಭಿನಯ ತರಬೇತಿಯ ಪ್ರಾಧಾನ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಮಕ್ಕಳ ನಟನೆಯಿಂದ ಮಕ್ಕಳಿಗೂ, ಹೆತ್ತವರಿಗೂ ಖುಷಿ, ಆಕರ್ಷಣೆ ಹೆಚ್ಚಲಿದೆ ಎಂದು ಮೋಹನ ಆಳ್ವ ಹೇಳಿದರು.
ಆಳ್ವಾಸ್ ಫೌಂಡೇಶನ್ ನ ಟ್ರಸ್ಟಿ ವಿವೇಕ ಆಳ್ವ, ರಂಗ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ, ಸಂಪನ್ಮೂಲ ವ್ಯಕ್ತಿ ರಂಗ ನಿರ್ದೇಶಕಿ ಗಿರಿಜಾ ಸಿದ್ದಿ, ಪತ್ರಕರ್ತ ಜಿತೇಂದ್ರ ಕುಂದೇಶ್ವರ, ಯೋಗೀಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಉದ್ಘಾಟನಾ ಸಂದರ್ಭದಲ್ಲಿ ರಿಷಿಕಾ ಕುಂದೇಶ್ವರ ಹರಿಕಥೆ, ಉದ್ಘಾಟನಾ ರಂಗಗೀತೆ ಹಾಗೂ ವೈದೇ ಹಿಯವರ ನಾಯಿಮರಿ ನಾಟಕದ ತುಣುಕು ಪ್ರದರ್ಶಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು