8:30 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕೋಟೆಕಾರು ಅಜ್ಜಿನಡ್ಕದಲ್ಲಿ ಬ್ಲೂಮೂನ್ ಸಂಸ್ಥೆಯ ‘ಆಕ್ಸಿಬ್ಲೂ ಜೂಸು’ ಲೋಕಾರ್ಪಣೆ

18/08/2021, 17:43

ಮಂಗಳೂರು(reporterkarnataka.com):

ಬ್ಲೂಮೂನ್ ಕಂಪೆನಿಯ ಆಕ್ಸಿಬ್ಲೂ ಪ್ರಸ್ತುತ ಪಡಿಸಿದ ಆಕ್ಸಿಬ್ಲೂ ಜ್ಯೂಸು ಕೋಟೆಕಾರು ಅಜ್ಜಿನಡ್ಕದಲ್ಲಿ ಲೋಕಾರ್ಪಣೆ ಗೊಂಡಿತು.
ಮ್ಯಾಂಗೋ, ಆಪಲ್, ಮಿಂಟ್, ಗೂವಾ ಪ್ಲವರ್ ಗಳ ನೂತನ ಉತ್ಪನ್ನಗಳನ್ನು ಖ್ಯಾತ ಚಲನಚಿತ್ರ ನಟ ನವೀನ್ ಡಿ.ಪಡೀಲ್ ಮತ್ತು ಸಾಮಾಜಿಕ ಮುಖಂಡ ಹೈದರ್ ಪರ್ತಿಪ್ಪಾಡಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನವೀನ್ ಡಿ.ಪಡೀಲ್ ” ಈ ಪರಿಸರದ ಖ್ಯಾತ ಖನಿಜಯುಕ್ತ ನೀರಿನ ಘಟಕ ಆಕ್ಸಿಬ್ಲೂ ಸಂಸ್ಥೆಯು ಆಕ್ಸಿಬ್ಲೂ ಜೂಸು ಎಂಬ ಆಕರ್ಷಕ ಹೆಸರಿನ ಉತ್ಪನ್ನ ಹೊರ ತಂದಿರುವುದು ಭಾರೀ ಸಂತೋಷದ ವಿಷಯ. ಸಮಾಜಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುವ ಮೂಲಕ ಎಲ್ಲೆಡೆ ಕೀರ್ತಿ ಪಡೆದಿರುವ ಆಝಾದ್ ಗ್ರೂಪ್ ಮಾಲಕರಾದ ಹಾಜಿ ಮನ್ಸೂರ್ ಅಹ್ಮದ್ ಆಝಾದ್ ರವರು ಈ ಎರಡು ಸಂಸ್ಥೆಗಳ ಮೂಲಕ ನೂರಾರು ಜನರಿಗೆ ಉದ್ಯೋಗ ಕಲ್ಪಿಸಿದ್ದಾರೆ.

ಹಿತ್ತಲ ಗಿಡ ಮದ್ದಲ್ಲ ಎಂಬಂತೆ ನಾವು ಹೊರಗಿನ ಉತ್ಪನ್ನಗಳನ್ನು ಬಳಸುವ ಬದಲು ನಮ್ಮ ಊರಿನ ಸಂಸ್ಥೆಗಳ ಉತ್ಪನ್ನಗಳನ್ನು ಖರೀದಿಸಿ  ಸ್ವದೇಶೀ ವಸ್ತುಗಳಿಗೆ ಪ್ರೋತ್ಸಾಹ ನೀಡಬೇಕು.

ಇದು ನಮ್ಮದೇ ಸಂಸ್ಥೆ ಎಂದು ಭಾವಿಸಿ ಪ್ರತಿಯೊಬ್ಬರೂ ಆಕ್ಸಿಬ್ಲೂ ಸಂಸ್ಥೆಯ ಖನಿಜಯುಕ್ತ ನೀರು ಮತ್ತು ಆಕ್ಸಿಬ್ಲೂ ಜೂಸು ಬಳಸಬೇಕು.

ಸಮಾಜಕ್ಕೆ ಅನಿವಾರ್ಯ ವೆನಿಸಿರುವ ಬ್ಲೂಮೂನ್ ಕಂಪನಿಯ ಆಕ್ಸಿಬ್ಲೂ ಸಂಸ್ಥೆಯನ್ನು ಬೆಳೆಸಿ ಉಳಿಸುವುದು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ಜನತೆಯ ಕರ್ತವ್ಯ.

ಈ ಸಂಸ್ಥೆಯ ಕಾರ್ಮಿಕರು, ವಿತರಕರು ಸಹಿತ ಸರ್ವರು ಕೂಡ ಸಂಸ್ಥೆಯ ಯಶಸ್ಸಿನಲ್ಲಿ ಪಾಲುದಾರರಾಗಿದ್ದಾರೆ.

ಆಕ್ಸಿಬ್ಲೂ ಖನಿಜಯುಕ್ತ ನೀರು ಮತ್ತು ಆಕ್ಸಿಬ್ಲೂ ಜೂಸು ಉತ್ಪನ್ನಗಳ ಪ್ರಚಾರದಲ್ಲಿ ಸರ್ವರೂ ಭಾಗೀದಾರರಾಗಿ ನಮ್ಮೂರಿನ ಉತ್ಪನ್ನಗಳ ಯಶಸ್ಸಿಗೆ ಶ್ರಮಿಸಬೇಕೆಂದು ಅವರು ಕರೆ ನೀಡಿದರು. ಪಾಲುದಾರರಾದ ಇಸ್ಮಾಯಿಲ್ ಕೋಟೆಕಾರ್, ವಿತರಕರಾದ ಬಾತಿಷ್ ಅಜ್ಜಿನಡ್ಕ, ಡಿ.ಎ.ಅಶ್ರಫ್ ದೇರಳಕಟ್ಟೆ ಭಾಗವಹಿಸಿದರು.

ಪ್ರೊಡಕ್ಷನ್ ಮ್ಯಾನೇಜರ್ ವಿನೋದ್, ಅಹ್ಮದ್ ಸಲ್ಮಿ,ಶಾಝ್ ಉಳ್ಳಾಲ ಅತಿಥಿಗಳನ್ನು ಸ್ವಾಗತಿಸಿದರು.

ಆಕ್ಸಿಬ್ಲೂ ಸಂಸ್ಥೆಯ ವ್ಯವಸ್ಥಾಪಕ ಡಿ.ಐ. ಅಬೂಬಕರ್ ಕೈರಂಗಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು