5:40 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ದುರಂತ ಸ್ಮಾರಕ ದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ: ಮಡಿದವರಿಗೆ ನಮನ

22/05/2024, 20:34

ಮಂಗಳೂರು(reporterkarnataka.com): ದೇಶದ ಜನರನ್ನು ಬೆಚ್ಚಿ ಬೀಳಿಸಿದ ಮಂಗಳೂರು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತ ಸಂಭವಿಸಿ ಇದೀಗ 14 ವರ್ಷ ತುಂಬುತ್ತಿದೆ. ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್‌ ನಿರ್ಮಿಸಲಾಗಿದೆ. ಇಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾಡಳಿತ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೇತೃತ್ವದಲ್ಲಿ ಪುಷ್ಪ ಗುಚ್ಛ ಇರಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾೖಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಲ್ಯಾಂಡ್‌ ಆಗುವ ಹಂತದಲ್ಲಿ ಚಾಲಕನ ಲೆಕ್ಕಾಚಾರ ತಪ್ಪಿ ಮಿತಿಗಿಂತ ಸ್ವಲ್ಪ ಮೀಟರ್‌ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಟರ್ಮಿನಲ್ ಬಳಿ ಕೆಂಜಾರಿನ ಕಡಿದಾದ ಗುಡ್ಡದಿಂದ ಕೆಳಗೆ ಉರುಳಿತ್ತು ಬೆಂಕಿ ಹತ್ತಿ ಕೊಂಡ ವಿಮಾನದಲ್ಲಿ ಪೈಲಟ್, ಸಿಬ್ಬಂದಿ ಸಹಿತ 158 ಮಂದಿ ಮೃತರಾಗಿದ್ದರು. ಈ ಪೈಕಿ 19 ಮಕ್ಕಳು ಹಾಗೂ 6 ಮಂದಿ ಶಿಶುಗಳು, 6 ವಿಮಾನ ಸಿಬ್ಬಂದಿ ಸೇರಿ 166 ಮಂದಿ ಪ್ರಯಾಣಿಸುತ್ತಿದ್ದರು.ಅಪಘಾತದಲ್ಲಿ ಬದುಕುಳಿದವರು 8 ಮಂದಿ ಮಾತ್ರ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ , ಮಂಗ ಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್,ಸಂತ್ರಸ್ತರ ಕುಟುಂಬದ ಸದಸ್ಯರಾದ ಶೊಭಾ ಶೆಟ್ಟಿ, ಶ್ರೇಯ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು