12:54 PM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ

22/05/2024, 22:02

ಬದಿಯಡ್ಕ(reporterkarnataka.com):ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಇದರ ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು.


ಯುವ ಬರಹಗಾರರು ಹಾಗೂ ನಾಟಕ, ಟಿವಿ ಧಾರಾವಾಹಿ ನಿರ್ದೇಶಕರಾದ ಸ್ಟ್ಯಾನಿ ಬೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್, ಸಾಹಿತ್ಯ ಅಕಾಡೆಮಿಯ ಇತಿಹಾಸ ಹಾಗೂ ಕಾರ್ಯಕ್ರಮಗಳ ವಿವರಣೆ ನೀಡಿದರು. ಯುವ ಸಾಹಿತಿಗಳಾದ ರಾಜು ಉಕ್ಕಿನಡ್ಕ, ರವಿ ಕುಮಾರ್ ಕ್ರಾಸ್ತ, ಪರಿಸರ ಹೋರಾಟಗಾರರಾದ ರಾಜು ಕಿದೂರು ಹಾಗೂ ವಾಣಿ ಕ್ರಾಸ್ತ ಸ್ವರಚಿತ ಕವನಗಳನ್ನು ವಾಚಿಸುವುದರೊಂದಿಗೆ ಪರಿಸರ, ಭಾಷೆ ಹಾಗೂ ಸಂಸ್ಕೃತಿಯ ಕುರಿತು ತಮ್ಮ ವಿಚಾರಗಳನ್ನು ಮಂಡಿಸಿದರು. ಕವಿತಾ ಟ್ರಸ್ಟ್ ಸದಸ್ಯರಾದ ವಿನ್ಸೆಂಟ್ ಪಿಂಟೊ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು