4:03 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಶಾಸಕ ಹರೀಶ್ ಪೂಂಜ ಬಂಧಿಸಲು ಹೋದ ಬೆಳ್ತಂಗಡಿ ಪೊಲೀಸರು ಬರಿಗೈಯಲ್ಲಿ ವಾಪಸ್: ನೋಟಿಸ್ ನೀಡಿ ಹಿಂತಿರುಗಿದ ಖಾಕಿ ಪಡೆ

22/05/2024, 22:48

ಬೆಳ್ತಂಗಡಿ(reporterkarnataka.com): ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರ ಬಂಧನನೋತ್ತರ ನಡೆದ ಘಟನೆಗಳಿಗೆ ಪೂರಕವಾಗಿ ದಾಖಲಾದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಹೋದ ಪೊಲೀಸರು ಶಾಸಕರಿಗೆ ನೋಟಿಸ್ ಕೊಟ್ಟು ಬರಿಗೈಯಲ್ಲಿ ವಾಪಸ್ ಬಂದ ಘಟನೆ ನಡೆದಿದೆ. ಈ ನಡುವೆ ನೋಟಿಸಿಗೆ ಉತ್ತರಿಸಲು ಶಾಸಕರು ಠಾಣೆಗೆ ಆಗಮಿಸಿದ್ದಾರೆ.
ಮೇಲಂತಬೆಟ್ಟು ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ, ಬಿಜೆಪಿ ಯುವ ಮೋರ್ಚಾದ ಶಶಿರಾಜ್ ಅವರ ಬಂಧನವನ್ನು ಪ್ರಶ್ನಿಸಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಗೆ ಹೋಗಿ ಪೊಲೀಸ್ ಠಾಣೆ ನಿಮ್ಮ ಅಪ್ಪಂದಾ? ಎಂದು ಸಬ್ ಇನ್ಸ್‌ಪೆಕ್ಟರ್ ಮುರಳೀಧರ ನಾಯಕ್ ಅವರಲ್ಲಿ ಪ್ರಶ್ನಿಸಿದ್ದರು. ನಂತರ ಠಾಣೆಯಲ್ಲಿ ರಾತ್ರಿ ಧರಣಿ ನಡೆಸಿದ್ದರು. ಮರುದಿನ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿಯನ್ನು ಡಿಜೆ ಹಳ್ಳಿ, ಕೆಜೆ ಹಳ್ಳಿ ಮಾಡುತ್ತೇನೆ ಎಂದು ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಾಗಿಸಲಾಗಿತ್ತು. ಶಾಸಕರ ಬಂಧನಕ್ಕೆ ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದರು. ಅಲ್ಲಿ ಬಿಜೆಪಿ ಸಂಸದರು, ಶಾಸಕರುಗಳು, ಹರೀಶ್ ಪೂಂಜ ಪರ ವಕೀಲರು ಹಾಗೂ ಅಪಾರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ನೆರೆದಿದ್ದರು. ಪೊಲೀಸ್ ಹಾಗೂ ಬಿಜೆಪಿ ನಾಯಕರ ನಡುವೆ ವಾದ- ಪ್ರತಿವಾದ ನಡೆಯಿತು. ನೋಟಿಸ್ ಕೊಟ್ಟು ಬಂಧಿಸಿ ಎಂದು ಬಿಜೆಪಿ ನಾಯಕರು ಹಾಗೂ ಪೂಂಜ ಪರ ವಕೀಲರು ವಾದಿಸಿದರು. ಕೊನೆಗೂ ಪೂಂಜ ಬಂಧನ ಸಾಧ್ಯವಾಗದೆ ಪೊಲೀಸರು ನೋಟಿಸ್ ನೀಡಿ ಬರಿಗೈಯಲ್ಲಿ ವಾಪಸಾದರು. ನಂತರ ಶಾಸಕರು ನೋಟಿಸಿಗೆ ಉತ್ತರಿಸಲು ಠಾಣೆಗೆ ಆಗಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು