5:53 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಕೇರಳದಲ್ಲಿ ಅಬ್ಬರದ ಪೂರ್ವ ಮುಂಗಾರು ವರ್ಷಧಾರೆ: ಕೊಚ್ಚಿಯ ಐಟಿ ಟೆಕ್ ಪಾರ್ಕ್ ಜಲಾವೃತ, ಗುರುವಾಯೂರು ದೇಗುಲಕ್ಕೂ ನೀರು

23/05/2024, 13:03

ತಿರುವನಂತಪುರಂ(reporterkarnataka.com):ಕೇರಳಕ್ಕೆ ಜೂನ್ 1ರಂದು ಮುಂಗಾರು ಆಗಮಿಸಲಿದ್ದು, ಪೂರ್ವ ಮುಂಗಾರು ಹಿನ್ನೆಲೆಯಲ್ಲಿ ಮುಂದಿನ 24 ಗಂಟೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಕೇರಳದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಧ್ಯ ಮತ್ತು ಉತ್ತರ ಕೇರಳದಾದ್ಯಂತ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೂರ್ವ ಮುಂಗಾರು ಅಬ್ಬರ ಕೇರಳದಲ್ಲಿ ಈಗಾಗಲೇ ಜೋರಾಗಿದ್ದು, ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಚ್ಚಿಯ ಐಟಿ ಟೆಕ್ ಪಾರ್ಕ್ ಜಲಾವೃತ ಗೊಂಡಿದೆ. ಆಫೀಸ್ ಒಳಭಾಗದಲ್ಲಿ ನೀರು ನಿಂತಿದ್ದು, ಪರಿಣಾಮ ಟೆಕ್ಕಿಗಳು ಪರದಾಡಿದ್ದಾರೆ. ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದ ಮುಂಭಾಗ ಕೂಡ ಜಲಾವೃತವಾಗಿದೆ. ಅಂಗಡಿಗಳಿಗೂ ನೀರು ನುಗ್ಗಿ ಅಸ್ತವ್ಯಸ್ತವಾಗಿತ್ತು.
ಪಾಲಕ್ಕಾಡ್ ಕಲ್ಲಡಿಕೋಡ್ ಎಂಬಲ್ಲಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಕರಿಂಬಾ ಅಯ್ಯಪ್ಪನಕೋಟ ಮಂಪುರಂ ನಿವಾಸಿ ಕಣ್ಣನ್ ಎಂಬವರ ಮನೆ ಬೆಂಕಿಗೆ ಆಹುತಿಯಾಗಿದೆ. ಮಂಪುರಂ ಮೂಲದ ರೆಗಿ ಮತ್ತು ಅವರ ಕುಟುಂಬ ಬಾಡಿಗೆಗೆ ಈ ಮನೆಯಲ್ಲಿ ವಾಸವಾಗಿದ್ದಾರೆ. ಮನೆಯಲ್ಲಿದ್ದ ಕಪಾಟುಗಳು, ಬೆಡ್‍ಗಳು ಇತ್ಯಾದಿಗಳು ಸುಟ್ಟು ಹೋಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು