3:58 AM Monday18 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್ ಹಿಂಸಾಚಾರವನ್ನು ಹೋಲಿಕೆ ಮಾಡಿದ ಸಂಸದ : ದೇಶದ್ರೋಹ ಪ್ರಕರಣ ದಾಖಲು

18/08/2021, 19:32

ಲಖನೌ(ReporteRkarnataka.com)

ಅಫ್ಘಾನಿಸ್ತಾನವನ್ನು ತಾಲಿಬಾನ್ ಕೈವಶ ಮಾಡಿಕೊಂಡಿರುವುದನ್ನು ಸಮರ್ಥಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಕೆ ಮಾಡಿದ ಸಮಾಜವಾದಿ ಪಕ್ಷದ ಸಂಸದ ಶಫಿಕುರ್‌ ರಹಮಾನ್‌ ಬರ್ಕ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆ ಕುರಿತು ಸೋಮವಾರ ವರದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದ ಸಂಭಲ್‌ ಲೋಕಸಭಾ ಕ್ಷೇತ್ರದ ಸಂಸದ ಶಫಿಕುರ್‌, ‘ಭಾರತವು ಬ್ರಿಟಿಷ್‌ ಆಡಳಿತಕ್ಕೆ ಒಳಪಟ್ಟಿದ್ದಾಗ, ಇಡೀ ರಾಷ್ಟ್ರವೇ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿತ್ತು.
ಅವರೂ ಸಹ ಸ್ವತಂತ್ರರಾಗಲು ಇಚ್ಛಿಸಿದ್ದಾರೆ. ಇದು ಅವರ ಖಾಸಗಿ ವಿಚಾರವಾಗಿದೆ. ಇದರಲ್ಲಿ ನಾವು ಹೇಗೆ ಮೂಗು ತೂರಿಸಲು ಸಾಧ್ಯ?’ ಎಂದಿದ್ದಾರೆ.

‘ಅಫ್ಗನ್ನರು ಅವರ ರಾಷ್ಟ್ರವನ್ನು ಅವರದೇ ರೀತಿಯಲ್ಲಿ ಮುನ್ನಡೆಸಲು ಬಯಸಿದ್ದಾರೆ. ತಾಲಿಬಾನಿಗಳು ಅವರ ರಾಷ್ಟ್ರವನ್ನು ಸ್ವತಂತ್ರಗೊಳಿಸಲು ಮುಂದಾಗಿದ್ದಾರೆ ಹಾಗೂ ಇದು ಅಫ್ಗಾನಿಸ್ತಾನದ ಆಂತರಿಕ ವಿಚಾರವಾಗಿದೆ’ ಎಂದು ಶಫಿಕುರ್‌ ಹೇಳಿದ್ದರು.

ಸಂಸದ ಶಫಿಕುರ್‌ ಅವರು ತಾಲಿಬಾನಿಗಳನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ಹೋಲಿಕೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ‘ಶಫಿಕುರ್‌ ಅವರ ವಿರುದ್ಧ ದೇಶ ದ್ರೋಹ (124ಎ), 154ಎ, 295 ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಫೇಸ್‌ಬುಕ್‌ ವಿಡಿಯೊದಲ್ಲೂ ಇಂಥದ್ದೇ ಹೇಳಿಕೆಗಳನ್ನು ನೀಡಿರುವ ಇಬ್ಬರು ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ’ ಎಂದು ಸಂಭಲ್‌ನ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು