7:29 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆ. 20ರಂದು ಆರಂಭ: ಏರ್ ಪೋರ್ಟ್ ನಲ್ಲಿ ರಾಪಿಡ್ ಆರ್‌ಟಿಪಿಸಿಆರ್ ಉಪಕರಣ ಅಳವಡಿಕೆ

18/08/2021, 22:10

ಮಂಗಳೂರು(reporterkarnataka.com):  ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆಗಸ್ಟ್ 20ರಂದು ಆರಂಭಗೊಳ್ಳಲಿದ್ದು, ಟಿಕೆಟ್‌ ಬುಕ್ಕಿಂಗ್‌ ಆರಂಭಗೊಂಡಿದೆ.

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಟ್ವಿಟ್ಟರ್‌ ಖಾತೆಯಲ್ಲಿ ಈ ವಿಷಯ ತಿಳಿಸಿದೆ.
ಈ ನಡುವೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌ ಟಿಪಿಸಿಆರ್ ಉಪಕರಣ ಅಳವಡಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ದುಬೈಗೆ ಬುಧವಾರದಿಂದ ವಿಮಾನ ಯಾನ ಸಂಚಾರ ಮತ್ತೆ ಆರಂಭಗೊಂಡಿದೆ. ಏರ್‌ ಇಂಡಿಯಾ ಎಕ್ಸ್‌ ಪ್ರಸ್‌ ವಿಮಾನವು ಮಂಗಳೂರಿನಿಂದ ಕೇರಳದ ತಿರುವನಂತಪುರ ಮೂಲಕ ದುಬೈ ತಲುಪಲಿದೆ. 

ಭಾರತದ ವಿಮಾನಗಳಿಗೆ ಯುಎಇ ವಿಧಿಸಿದ್ದ ನಿರ್ಬಂಧವನ್ನು ಆಗಸ್ಟ್ 5 ರಂದು ವಾಪಸ್‌ ಪಡೆದಿತ್ತು. ಆದರೆ ಭಾರತದಿಂದ ಹೊರಡುವ 48 ಗಂಟೆ ಮೊದಲು ನಡೆಸಿದ ಆರ್‌.ಟಿ.ಪಿ.ಸಿ.ಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಮತ್ತು 4 ಗಂಟೆ ಮೊದಲು ನಡೆಸಿದ ರ್ಯಾಪಿಡ್‌ ಆರ್‌ಟಿಪಿಸಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಹೊಂದಿದವರು ಮಾತ್ರ ಯುಎಇಗೆ ಬರಬಹುದು ಎಂದು ಷರತ್ತು ವಿಧಿಸಿತ್ತು. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌ಟಿಪಿಸಿಆರ್ ಉಪಕರಣ ಅಳವಡಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಅತ್ಯಾಧುನಿಕ ರ್ಯಾಪಿಡ್‌ ಆರ್‌ಟಿಪಿಸಿಆರ್‌ ಪರೀಕ್ಷೆ ಬುಧವಾರದಿಂದ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು