3:43 AM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆ. 20ರಂದು ಆರಂಭ: ಏರ್ ಪೋರ್ಟ್ ನಲ್ಲಿ ರಾಪಿಡ್ ಆರ್‌ಟಿಪಿಸಿಆರ್ ಉಪಕರಣ ಅಳವಡಿಕೆ

18/08/2021, 22:10

ಮಂಗಳೂರು(reporterkarnataka.com):  ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆಗಸ್ಟ್ 20ರಂದು ಆರಂಭಗೊಳ್ಳಲಿದ್ದು, ಟಿಕೆಟ್‌ ಬುಕ್ಕಿಂಗ್‌ ಆರಂಭಗೊಂಡಿದೆ.

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಟ್ವಿಟ್ಟರ್‌ ಖಾತೆಯಲ್ಲಿ ಈ ವಿಷಯ ತಿಳಿಸಿದೆ.
ಈ ನಡುವೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌ ಟಿಪಿಸಿಆರ್ ಉಪಕರಣ ಅಳವಡಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ದುಬೈಗೆ ಬುಧವಾರದಿಂದ ವಿಮಾನ ಯಾನ ಸಂಚಾರ ಮತ್ತೆ ಆರಂಭಗೊಂಡಿದೆ. ಏರ್‌ ಇಂಡಿಯಾ ಎಕ್ಸ್‌ ಪ್ರಸ್‌ ವಿಮಾನವು ಮಂಗಳೂರಿನಿಂದ ಕೇರಳದ ತಿರುವನಂತಪುರ ಮೂಲಕ ದುಬೈ ತಲುಪಲಿದೆ. 

ಭಾರತದ ವಿಮಾನಗಳಿಗೆ ಯುಎಇ ವಿಧಿಸಿದ್ದ ನಿರ್ಬಂಧವನ್ನು ಆಗಸ್ಟ್ 5 ರಂದು ವಾಪಸ್‌ ಪಡೆದಿತ್ತು. ಆದರೆ ಭಾರತದಿಂದ ಹೊರಡುವ 48 ಗಂಟೆ ಮೊದಲು ನಡೆಸಿದ ಆರ್‌.ಟಿ.ಪಿ.ಸಿ.ಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಮತ್ತು 4 ಗಂಟೆ ಮೊದಲು ನಡೆಸಿದ ರ್ಯಾಪಿಡ್‌ ಆರ್‌ಟಿಪಿಸಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಹೊಂದಿದವರು ಮಾತ್ರ ಯುಎಇಗೆ ಬರಬಹುದು ಎಂದು ಷರತ್ತು ವಿಧಿಸಿತ್ತು. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌ಟಿಪಿಸಿಆರ್ ಉಪಕರಣ ಅಳವಡಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಅತ್ಯಾಧುನಿಕ ರ್ಯಾಪಿಡ್‌ ಆರ್‌ಟಿಪಿಸಿಆರ್‌ ಪರೀಕ್ಷೆ ಬುಧವಾರದಿಂದ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು