3:03 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಗವರ್ನರ್, ಸಿಎಂ ಸಹಿತ ವಿವಿಐಪಿಗಳ ಆಗಮನ: ಮೇ 25, 26ರಂದು ಕಡಲನಗರಿಯಲ್ಲಿ ಸಂಚಾರ ಬದಲಾವಣೆ

24/05/2024, 21:56

ಮಂಗಳೂರು(reporterkarnataka.com): ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಇತರ ಗಣ್ಯರು ಮೇ 25 ಮತ್ತು 26ರಂದು ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.
ನಗರದ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಇತರ ಗಣ್ಯರು ಭಾಗವಹಿಸುವ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದಾಗಿ ನವಭಾರತ ಸರ್ಕಲ್‌ನಿಂದ ಪಿವಿಎಸ್ ಮುಖಾಂತರ ಲೇಡಿಹಿಲ್ ಸರ್ಕಲ್ ಕಡೆಗೆ ಹೋಗುವ ಎಂ.ಜಿ. ರಸ್ತೆಯಲ್ಲಿನ ಎಲ್ಲಾ ಮೀಡಿಯನ್‌ಗಳನ್ನು ಮುಚ್ಚಬೇಕಾಗುತ್ತದೆ. (ಬೆಸೆಂಟ್ ಜಂಕ್ಷನ್, ಕೋಡಿಯಾಲ್‌ಗುತ್ತು ಕ್ರಾಸ್, ಬಲ್ಲಾಳ್‌ಬಾಗ್ ಜಂಕ್ಷನ್, ನೆಹರೂ ಅವೆನ್ಯೂ ಜಂಕ್ಷನ್). ಹಾಗಾಗಿ ಈ ರಸ್ತೆಯನ್ನು ಉಪಯೋಗಿಸುವ ಎಲ್ಲಾ ವಾಹನ ಚಾಲಕರಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಸೂಚಿಸಲಾಗಿದೆ.
*ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿರುವ ಸ್ಥಳಗಳು:*
ಕೊಟ್ಟಾರ ಚೌಕಿ, ಕುಂಟಿಕಾನ, ಕೆ.ಪಿ.ಟಿ, ನಂತೂರು, ಕೆ.ಎಸ್.ಆರ್.ಟಿ.ಸಿ., ಬಂಟ್ಸ್ ಹಾಸ್ಟೆಲ್, ಡಾ. ಅಂಬೇಡ್ಕರ್ ಸರ್ಕಲ್, ಹಾರ್ಟಿಕಲ್ಚರ್ ಜಂಕ್ಷನ್, ಬಲ್ಮಠ, ಹಂಪನಕಟ್ಟೆ, ಕರಾವಳಿ ಸರ್ಕಲ್, ಕಂಕನಾಡಿ, ಪಂಪ್‌ವೆಲ್, ತೊಕ್ಕೊಟ್ಟು.
*ಮಂಗಳೂರು ನಗರದಲ್ಲಿ ಮಾಡಲಾಗಿರುವ ಸಂಚಾರ ಪರ್ಯಾಯ ವ್ಯವಸ್ಥೆ ಈ ಕೆಳಕಂಡಂತಿರುತ್ತದೆ.*
*ಹಂಪನಕಟ್ಟೆಯಿಂದ ಬಂಟ್ಸ್ ಹಾಸ್ಟೆಲ್ ಮುಖಾಂತರ ಲೇಡಿಹಿಲ್‌ಗೆ ಹೋಗುವ ಎಲ್ಲಾ ವಾಹನಗಳು ಕರಂಗಲಪಾಡಿ ಅಥವಾ ಭಾರತ್‌ಬೀಡಿ ಜಂಕ್ಷನ್ ಮುಖಾಂತರ ಚಲಿಸುವುದು.
* ಪಿ.ವಿ.ಎಸ್ ಜಂಕ್ಷನ್‌ನಿಂದ ಲೇಡಿಹಿಲ್ ಸರ್ಕಲ್‌ವರೆಗಿನ ಎಂ.ಜಿ. ರಸ್ತೆಗೆ ಬಂದು ಸೇರುವ ಎಲ್ಲಾ ಕೂಡು ರಸ್ತೆಗಳನ್ನು ಉಪಯೋಗಿಸುವ ವಾಹನ ಸವಾರರು ಬಿಜೈ ಚರ್ಚ್ ರೋಡ್ / ಕುದ್ರೋಳಿ ರಸ್ತೆಯನ್ನು ಉಪಯೋಗಿಸುವುದು.

*ಬಸ್ಸುಗಳ ಸಂಚಾರಕ್ಕೆ ನಿಗದಿಪಡಿಸಿದ ರಸ್ತೆಗಳು:*
* ಕೆ.ಎಸ್.ರಾವ್ ರಸ್ತೆ, ಎಂ.ಜಿ. ರಸ್ತೆ, ಬಂಟ್ಸ್ ಹಾಸ್ಟೆಲ್ ಮುಖಾಂತರ ಸಂಚರಿಸುವ ಎಲ್ಲಾ ಸಿಟಿ ಬಸ್ಸುಗಳು, ಎಕ್ಸ್‌ಪ್ರೆಸ್ ಬಸ್ಸುಗಳು ಹಾಗೂ KSRTC ಬಸ್ಸುಗಳು ಹಂಪನಕಟ್ಟ, ಡಾ.ಅಂಬೇಡ್ಕರ್ ವೃತ್ತ, ಬಲ್ಮಠ, ಹಾರ್ಟಿಕಲ್ಚರ್ ಜಂಕ್ಷನ್, ಕದ್ರಿ ಜಂಕ್ಷನ್, ನಂತೂರು ಮುಖಾಂತರ ಸಂಚರಿಸಲು ಸೂಚಿಸಿದೆ.
* ಕೊಟ್ಟಾರಚೌಕಿ ಮುಖಾಂತರ ಸ್ಟೇಟ್‌ಬ್ಯಾಂಕ್ ಕಡೆಗೆ ಬರುವ ಎಲ್ಲಾ ಸಿಟಿ ಬಸ್ಸುಗಳು, ಎಕ್ಸ್‌ಪ್ರೆಸ್ ಬಸ್ಸುಗಳು ಹಾಗೂ KSRTC ಬಸ್ಸುಗಳು ನಂತೂರು ಮುಖಾಂತರ ಸಂಚರಿಸಲು ಸೂಚಿಸಿದೆ.
* KSRTC ಬಸ್ಸ್ ನಿಲ್ದಾಣದಿಂದ ಹೊರಹೋಗುವ ಹಾಗೂ ಒಳಬರುವ ಎಲ್ಲಾ ಬಸ್ಸುಗಳು ರಾಷ್ಟ್ರೀಯ ಹೆದ್ದಾರಿಯ ಕುಂಟಿಕಾನ ಜಂಕ್ಷನ್ ಮೂಲಕ ಒಳ ಬರಲು ಹಾಗೂ ಹೊರ ಹೋಗಲು ಸೂಚಿಸಿದೆ.
*ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು:*
ಪಿ.ವಿ.ಎಸ್ ಜಂಕ್ಷನ್‌ನಿಂದ ಲಾಲ್‌ಭಾಗ್ ಜಂಕ್ಷನ್‌ವರೆಗಿನ ಎಂ.ಜಿ ರಸ್ತೆಯಲ್ಲಿ, PVS ಜಂಕ್ಷನ್ ನಿಂದ ಬಂಟ್ಸ್ ಹಾಸ್ಟೆಲ್ ಜಂಕ್ಷನ್‌ವರೆಗೆ ಹಾಗೂ ಲಾಲ್‌ಬಾಗ್ ಜಂಕ್ಷನ್‌ನಿಂದ ಕೆ.ಪಿ.ಟಿ ಜಂಕ್ಷನ್‌ವರೆಗಿನ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು