1:13 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ಪೂರ್ವ ಮುಂಗಾರಿಗೇ ಅನಾಹುತ: ಅಬ್ಬಕ್ಕನಗರಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆಟೋ ಉರುಳಿ ಚಾಲಕ ಸಾವು

25/05/2024, 12:09

ಮಂಗಳೂರು(reporterkarnataka.com):
ಮುಂಗಾರು ಪೂರ್ವ ಮಳೆಗೆ ಕಡಲನಗರಿಯಲ್ಲಿ ಜೀವಹಾನಿ ಸಂಭವಿಸಿದೆ. ನಗರದ ಕೊಟ್ಟಾರಚೌಕಿ ಬಳಿ
ಮೊದಲ ಮಳೆಗೇ ನಗರದಲ್ಲಿ ಜೀವಹಾನಿ ಸಂಭವಿಸಿದ್ದು, ಆಟೋ ರಿಕ್ಷಾ ತೋಡಿಗೆ ಉರುಳಿ ಚಾಲಕ ಮೃತಪಟ್ಟ ಘಟನೆ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆಟೋರಿಕ್ಷಾವೊಂದು ಉರುಳಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟಿದ್ದಾರೆ.
ಸಾವನ್ನಪ್ಪಿದವರನ್ನು ಸ್ಥಳೀಯ ನಿವಾಸಿ ಆಟೋಚಾಲಕ ದೀಪಕ್ (40) ಎಂದು ಗುರುತಿಸಲಾಗಿದೆ.
ಶುಕ್ರವಾರ ರಾತ್ರಿಸುರಿದ ಅಬ್ಬರದ ಮಳೆಗೆ ಕೊಟ್ಟಾರ ಅಬ್ಬಕ್ಕ ನಗರದಲ್ಲಿನ ತೋಡು ತುಂಬಿ ರಸ್ತೆಯ ಮೇಲೆ ಹರಿಯುತ್ತಿತ್ತು. ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ರಿಕ್ಷಾ ಉರುಳಿ ತೋಡಿಗೆ ಬಿದ್ದಿದೆ‌. ತೋಡು ಭರ್ತಿ ನೀರಿದ್ದ ಪರಿಣಾಮ ರಿಕ್ಷಾ ಚಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
*ಪಾಲಿಕೆ ನಿರ್ಲಕ್ಷ್ಯ*: ತೋಡಿಗೆ ಸರಿಯಾಗಿ ತಡೆಗೋಡೆ ನಿರ್ಮಿಸದ ಕಾರಣ ದುರಂತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು