12:59 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕಾನೂನು ಎಲ್ಲರಿಗೂ ಒಂದೇ ಅಲ್ವೇನ್ರೀ? ಎಂಎಲ್ ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ?: ಶಾಸಕ ಪೂಂಜ ಪ್ರಕರಣ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

25/05/2024, 14:30

ಮಂಗಳೂರು(reporterkarnataka.com): ಕಾನೂನು ಎಲ್ಲರಿಗೂ ಒಂದೇ ಅಲ್ವೇನ್ರೀ?. ಎಂಎಲ್ ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ? ಎಂಎಲ್ ಎ ಅಂತ ಪೊಲೀಸರ ಮೇಲೆ ಗಲಾಟೆ ಮಾಡೋಕೆ ಆಗುತ್ತಾ?
ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಕರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮ ಜತೆ ಅವರು ಮಾತನಾಡಿದರು‌.
ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಐಪಿಸಿ ಸೆಕ್ಷನ್ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದು ನಾನ್ ಬೇಲೇಬಲ್ ಅಫೆನ್ಸ್. ಈ ಪ್ರಕರಣ ಬೇಲೆಬಲ್ ಅಫೆನ್ಸ್ ಅಲ್ಲ. ಇದರಲ್ಲಿ 7 ವರ್ಷ ಜೈಲು ಶಿಕ್ಷೆಯಾಗುತ್ತದೆ. ಎಂಎಲ್ ಎ ಅಂತ ಅವರನ್ನು ಬಿಟ್ಟು ಬಿಡೋಕೆ ಆಗುತ್ತಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಹರೀಶ್ ಪೂಂಜ ವಿರುದ್ಧ ಎರಡು ಪ್ರಕರಣಗಳಿವೆ. ಅವರು ಯಾರ ಪರವಾಗಿ ಗಲಾಟೆ ಮಾಡಿದ್ದಾರೆ ಗೊತ್ತಾ ಎಂದು ಸಿಎಂ ಮರುಪ್ರಶ್ನೆ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು